<p><strong>ಬೆಂಗಳೂರು:</strong> ವೈಟ್ಫೀಲ್ಡ್ನಲ್ಲಿರುವ ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಸಂಸ್ಥೆಯು ಐಜಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಮೊದಲ ಬಾರಿಗೆ ಸರಕು ಸಾಗಾಣೆ ರೈಲಿನ ಮೂಲಕ ತಾಜಾ ಹಣ್ಣುಗಳನ್ನು ಆಮದು ಮಾಡಿಕೊಂಡಿದೆ.</p>.<p>ಬ್ರೆಜಿಲ್, ಚಿಲಿ ಹಾಗೂ ಇರಾನ್ನಿಂದ ಮುಂಬೈಗೆ ಬಂದಿದ್ದ ಸೇಬು, ಕಿವಿ, ಚೆರ್ರಿ ಸೇರಿದಂತೆ ಅನೇಕ ಹಣ್ಣುಗಳನ್ನುಶೈತ್ಯೀಕೃತವಾಗಿದ್ದ 44 ಕಂಟೇನರ್ಗಳಲ್ಲಿ ಬೆಂಗಳೂರಿಗೆ ತರಿಸಿಕೊಳ್ಳಲಾಗಿದೆ. ವಿದೇಶದಿಂದ ತಂದ ಹಣ್ಣುಗಳನ್ನು ಗ್ರಾಹಕರಿಗೆ ಅತಿ ಕಡಿಮೆ ಬೆಲೆಗೆ ಮಾರಲು ಇದರಿಂದ ಸಹಾಯಕವಾಗಲಿದೆ.</p>.<p>ಐಜಿ ಇಂಟರ್ನ್ಯಾಷನಲ್ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗ್ಯಾನ್ಚಂದ್ ಅರೋರಾ ‘ಆರೋಗ್ಯದ ಬಗ್ಗೆ ಎಲ್ಲರೂ ಕಾಳಜಿ ವಹಿಸುತ್ತಾರೆ. ಅಂತಹವರಿಗೆ ತಾಜಾ ಹಣ್ಣುಗಳನ್ನು ಪೂರೈಸುವುದು ನಮ್ಮ ಉದ್ದೇಶ. ಹೀಗಾಗಿ ಕಾನ್ಕರ್ ಸಹಭಾಗಿತ್ವದಲ್ಲಿ ತಾಜಾ ಹಣ್ಣುಗಳನ್ನು ಆಮದು ಮಾಡಿಕೊಂಡು ಅವುಗಳನ್ನು ವಿವಿಧ ನಗರಗಳಿಗೆ ಸಾಗಾಣಿಕೆ ಮಾಡಲು ನಿರ್ಧರಿಸಿದ್ದೇವೆ’ ಎಂದರು.</p>.<p>ಕಾನ್ಕರ್ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಅನೂಪ್ ದಯಾನಂದ್ ‘ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಪೌಷ್ಠಿಕಾಂಶಯುಕ್ತ ಆಹಾರ ತೆಗೆದುಕೊಳ್ಳುವುದು ತೀರಾ ಅಗತ್ಯ. ಇದನ್ನು ಗಮನದಲ್ಲಿಟ್ಟುಕೊಂಡು ಜಗತ್ತಿನ ನಾನಾ ಭಾಗಗಳಿಂದ ತಾಜಾ ಹಣ್ಣುಗಳನ್ನು ತರಿಸಲಾಗುತ್ತಿದೆ. ಈ ಕಾರ್ಯದಲ್ಲಿ ಐಜಿ ಇಂಟರ್ನ್ಯಾಷನಲ್ ಜೊತೆ ಕೈಜೋಡಿಸಿರುವುದು ಸಂತಸ ನೀಡಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವೈಟ್ಫೀಲ್ಡ್ನಲ್ಲಿರುವ ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಸಂಸ್ಥೆಯು ಐಜಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಮೊದಲ ಬಾರಿಗೆ ಸರಕು ಸಾಗಾಣೆ ರೈಲಿನ ಮೂಲಕ ತಾಜಾ ಹಣ್ಣುಗಳನ್ನು ಆಮದು ಮಾಡಿಕೊಂಡಿದೆ.</p>.<p>ಬ್ರೆಜಿಲ್, ಚಿಲಿ ಹಾಗೂ ಇರಾನ್ನಿಂದ ಮುಂಬೈಗೆ ಬಂದಿದ್ದ ಸೇಬು, ಕಿವಿ, ಚೆರ್ರಿ ಸೇರಿದಂತೆ ಅನೇಕ ಹಣ್ಣುಗಳನ್ನುಶೈತ್ಯೀಕೃತವಾಗಿದ್ದ 44 ಕಂಟೇನರ್ಗಳಲ್ಲಿ ಬೆಂಗಳೂರಿಗೆ ತರಿಸಿಕೊಳ್ಳಲಾಗಿದೆ. ವಿದೇಶದಿಂದ ತಂದ ಹಣ್ಣುಗಳನ್ನು ಗ್ರಾಹಕರಿಗೆ ಅತಿ ಕಡಿಮೆ ಬೆಲೆಗೆ ಮಾರಲು ಇದರಿಂದ ಸಹಾಯಕವಾಗಲಿದೆ.</p>.<p>ಐಜಿ ಇಂಟರ್ನ್ಯಾಷನಲ್ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗ್ಯಾನ್ಚಂದ್ ಅರೋರಾ ‘ಆರೋಗ್ಯದ ಬಗ್ಗೆ ಎಲ್ಲರೂ ಕಾಳಜಿ ವಹಿಸುತ್ತಾರೆ. ಅಂತಹವರಿಗೆ ತಾಜಾ ಹಣ್ಣುಗಳನ್ನು ಪೂರೈಸುವುದು ನಮ್ಮ ಉದ್ದೇಶ. ಹೀಗಾಗಿ ಕಾನ್ಕರ್ ಸಹಭಾಗಿತ್ವದಲ್ಲಿ ತಾಜಾ ಹಣ್ಣುಗಳನ್ನು ಆಮದು ಮಾಡಿಕೊಂಡು ಅವುಗಳನ್ನು ವಿವಿಧ ನಗರಗಳಿಗೆ ಸಾಗಾಣಿಕೆ ಮಾಡಲು ನಿರ್ಧರಿಸಿದ್ದೇವೆ’ ಎಂದರು.</p>.<p>ಕಾನ್ಕರ್ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಅನೂಪ್ ದಯಾನಂದ್ ‘ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಪೌಷ್ಠಿಕಾಂಶಯುಕ್ತ ಆಹಾರ ತೆಗೆದುಕೊಳ್ಳುವುದು ತೀರಾ ಅಗತ್ಯ. ಇದನ್ನು ಗಮನದಲ್ಲಿಟ್ಟುಕೊಂಡು ಜಗತ್ತಿನ ನಾನಾ ಭಾಗಗಳಿಂದ ತಾಜಾ ಹಣ್ಣುಗಳನ್ನು ತರಿಸಲಾಗುತ್ತಿದೆ. ಈ ಕಾರ್ಯದಲ್ಲಿ ಐಜಿ ಇಂಟರ್ನ್ಯಾಷನಲ್ ಜೊತೆ ಕೈಜೋಡಿಸಿರುವುದು ಸಂತಸ ನೀಡಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>