ಬೆಂಗಳೂರಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ‘ಸಚಿವ ಸಂಪುಟ ಪುನರ್ ರಚನೆ ಕುರಿತು ನಡ್ಡಾ ಅವರ ಜೊತೆ ವಿಸ್ತೃತ ಚರ್ಚೆ ನಡೆದಿದೆ. ಪಕ್ಷದ ವರಿಷ್ಠರು ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗಾಗಿ ಕರ್ನಾಟಕಕ್ಕೆ ಭೇಟಿ ನೀಡಿದ ಸಂದರ್ಭ ಹೆಚ್ಚುವರಿ ಚರ್ಚೆ ನಡೆಸಲಾಗುವುದು ಎಂದು ನಡ್ಡಾ ಹೇಳಿದ್ದಾರೆ’ ಎಂದು ತಿಳಿಸಿದ್ದಾರೆ.