‘ಶಾಂತವೇರಿ ಗೋಪಾಲಗೌಡ ಅವರು ಕನ್ನಡ ಭಾಷೆಯ ಬಗ್ಗೆ ಅಪಾರ ಅಭಿಮಾನ ಹೊಂದಿದ್ದರು. ರಾಜ್ಯಪಾಲರು ಕನ್ನಡದಲ್ಲಿಯೇ ಮಾತನಾಡಬೇಕು ಎಂದು ವಿಧಾನಸಭೆಯಲ್ಲಿ ಪಟ್ಟುಹಿಡಿದು ಕುಳಿತಿದ್ದರು. ಅದಕ್ಕೆ ಒಪ್ಪದಿದ್ದಾಗ ರಾಜ್ಯಪಾಲರ ಭಾಷಣದ ಪ್ರತಿಯನ್ನೇ ಸದನದಲ್ಲಿ ಹರಿದು ಹಾಕಿ, ತಾತ್ವಿಕ ಸಿಟ್ಟನ್ನು ವ್ಯಕ್ತಪಡಿಸಿದ್ದರು. ಅಂತಹ ಮೌಲ್ಯಯುತ ರಾಜಕೀಯ ಮುತ್ಸದಿಗಳು ಈಗ ನಾಡಿಗೆ ಬೇಕಾಗಿದೆ’ ಎಂದು ಹೇಳಿದರು.