ಮುಳಬಾಗಿಲು (ಕೋಲಾರ): ನಗರದ ನೂಗಲಬಂಡೆ ಬಡಾವಣೆಯಲ್ಲಿ ಶುಕ್ರ ವಾರ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಗೂ ಮುನ್ನ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಯುವಕರಿಬ್ಬರು ಗಾಯಗೊಂಡಿದ್ದು, ಹಲ್ಲೆ ನಡೆಸಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮನೋಜ್ (21) ಹಾಗೂ ಸುರೇಂದ್ರ (19) ಗಾಯಗೊಂಡಿದ್ದಾರೆ. ಅಕ್ಬರ್, ಅಫ್ಜಲ್, ಯಾಸಿನ್ ಪಾಷಾ ಎಂಬ ಯುವಕರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಈಗ ಪರಿಸ್ಥಿತಿ ಶಾಂತವಾಗಿದೆ’ ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.