ಗರ್ಭಪಾತದ ನಂತರ ರಕ್ತಹೀನತೆಗೆ ಒಳಗಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮಹಿಳೆ ತಿಂಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ತಾಯಿಯ ಜತೆ ಇದ್ದ ಮಗಳಿಗೆ ಮನೋಜ್ ನಿತ್ಯವೂ ಸಹಾಯ ಮಾಡುತ್ತಿದ್ದ. ಇಬ್ಬರ ಮಧ್ಯೆ ಸಲುಗೆ ಬೆಳೆದಿತ್ತು. ಅದನ್ನೇ ದುರುಪಯೋಗ ಪಡಿಸಿಕೊಂಡ ಆರೋಪಿ, ಸ್ನೇಹಿತರಾದ ಪ್ರಜ್ವಲ್, ವಿನಯ್, ಸಂದೀಪ್ ಜತೆ ಸಾಗರ ರಸ್ತೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವುದು ತನಿಖೆಯಿಂದ ತಿಳಿದಿದೆ ಎಂದು ಪೊಲೀಸರು ತಿಳಿಸಿದರು.