ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರನೇ ಅಲೆ ತಪ್ಪಿಸಲು ಲಸಿಕೆ ಹಾಕಿಸಿಕೊಳ್ಳಿ: ಸಚಿವ ಡಾ.ಕೆ.ಸುಧಾಕರ್‌ ಮನವಿ

Last Updated 16 ಏಪ್ರಿಲ್ 2021, 10:56 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಮೂರನೇ ಅಲೆ ತಪ್ಪಿಸಲು ಸಾರ್ವಜನಿಕರು ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಮನವಿ ಮಾಡಿದ್ದಾರೆ.

ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಉದಾಸೀನತೆ ಬಿಡಬೇಕು. ಇಲ್ಲವಾದರೆ ಮೂರನೇ ಅಲೆ ತಡೆಯಲು ಸಾಧ್ಯವಿಲ್ಲ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಲಸಿಕೆ ಹಾಕಿಸಿಕೊಂಡರೆ ಕೋವಿಡ್‌ ಸೋಂಕು ತಗುಲುವುದಿಲ್ಲ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆದರೆ, ಸೋಂಕು ತಗುಲುವುದು ಕಡಿಮೆ ಆಗುತ್ತದೆ. ಸಾವಿನ ಪ್ರಮಾಣ ಕಡಿಮೆಯಾಗುತ್ತದೆ. ಹಲವು ದೇಶಗಳಲ್ಲಿ ಈಗಾಗಲೇ ಮೂರನೇ ಅಲೆ ಕಾಣಿಸಿಕೊಂಡಿದೆ. ನಮ್ಮಲ್ಲಿ ಅದನ್ನು ತಡೆಯಬೇಕಿದ್ದರೆ, ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.

ಬೆಂಗಳೂರಿನ ಕೆಲವು ತಾರಾ ಹೋಟೆಲ್‌ಗಳಲ್ಲಿ ತಾತ್ಕಾಲಿಕ ಕೋವಿಡ್‌ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗುವುದು. ಇದಕ್ಕಾಗಿ 10 ಹೋಟೆಲ್‌ಗಳ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಪ ಪ್ರಮಾಣದ ರೋಗ ಲಕ್ಷಣ ಇರುವವರಿಗೆ ಅಲ್ಲಿ ಚಿಕಿತ್ಸೆ ನೀಡಲಾಗುವುದು. ಈ ಮೂಲಕ ಮೂರು ಸಾವಿರ ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಸುಧಾಕರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT