<p><strong>ಬೆಂಗಳೂ</strong>ರು: ಸಂಯುಕ್ತ ಅರಬ್ ಸಂಸ್ಥಾನದ (ಯುಎಇ) ಗಲ್ಫ್ ಇಸ್ಲಾಮಿಕ್ ಹೂಡಿಕೆ (ಜಿಐಐ) ಸಂಸ್ಥೆಯು ಬೆಂಗಳೂರಿನಲ್ಲಿ ತನ್ನ ಕಚೇರಿ ತೆರೆಯಲು ನಿರ್ಧರಿಸಿದ್ದು, ಕರ್ನಾಟಕದಲ್ಲಿ ಮೂರು ವರ್ಷಗಳಲ್ಲಿ ₹ 3,500 ಕೋಟಿ ಹೂಡಿಕೆ ಮಾಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ತಿಳಿಸಿದ್ದಾರೆ.</p>.<p>ದುಬೈ ವರ್ಲ್ಡ್ ಎಕ್ಸ್ಪೋದಲ್ಲಿ ಸೋಮವಾರ ಜಿಐಐ ಸಮೂಹದ ಉದ್ದಿಮೆಗಳೊಂದಿಗೆ ರಾಜ್ಯ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದೆ. ಆ ಬಳಿಕ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ‘ಯುಎಇಯ ಪ್ರಮುಖ ಷರಿಯಾ– ಕಂಪ್ಲೈಂಟ್ ಹಣಕಾಸು ಸಂಸ್ಥೆಯಾಗಿರುವ ಜಿಐಐ ಬೆಂಗಳೂರಿನಲ್ಲಿ ತನ್ನ ಕಚೇರಿ ತೆರೆಯುವ ನಿರ್ಧಾರ ಮಾಡಿದೆ. ಆ ಮೂಲಕ ಭಾರತೀಯ ನವೋದ್ಯಮಗಳಿಗೆ ಸಹಭಾಗಿತ್ವ ನೀಡಲಿದೆ’ ಎಂದು ಹೇಳಿದ್ದಾರೆ.</p>.<p>ಜಿಐಐ ನಿರ್ಧಾರದಿಂದ ಕರ್ನಾಟಕ ಮತ್ತು ಯುಎಇ ನಡುವಣ ಸಂಬಂಧ ಮತ್ತಷ್ಟು ವೃದ್ಧಿಯಾಗಲಿದೆ. ರಾಜ್ಯದಲ್ಲಿರುವ ಹೂಡಿಕೆಯ ಅವಕಾಶಗಳನ್ನು ಯುಎಇ ಬಳಸಿಕೊಳ್ಳಲು ಅವಕಾಶ ದೊರೆಯಲಿದೆ ಎಂದು ತಿಳಿಸಿದ್ದಾರೆ.</p>.<p>ಒಪ್ಪಂದದ ಬಳಿಕ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಜಿಐಐ ಪಾಲುದಾರರಾದ ಮೊಹಮ್ಮದ್ ಅಲ್ಹಾಸನ್ ಮತ್ತು ಪಂಕಜ್ ಗುಪ್ತಾ, ‘ಭಾರತವು ಜಿಐಐಗೆ ಪ್ರಮುಖ ಹೂಡಿಕೆಯ ತಾಣವಾಗಿದೆ. ಆರಂಭಿಕ ಸುತ್ತಿನ ಮಾತುಕತೆಗಳಲ್ಲೇ ದೊಡ್ಡ ಯಶಸ್ಸು ದೊರಕಿದೆ. ₹ 1,000 ಕೋಟಿಗೂ ಹೆಚ್ಚು ವಹಿವಾಟು ನಡೆಸಲು ಜಿಐಐ ಉತ್ಸುಕವಾಗಿದೆ’ ಎಂದಿದ್ದಾರೆ.</p>.<p>ಭಾರತದ ಕಾನ್ಸಲ್ ಜನರಲ್ ಡಾ.ಅಮಾನ್ ಪುರಿ ಒಪ್ಪಂದದ ವೇಳೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂ</strong>ರು: ಸಂಯುಕ್ತ ಅರಬ್ ಸಂಸ್ಥಾನದ (ಯುಎಇ) ಗಲ್ಫ್ ಇಸ್ಲಾಮಿಕ್ ಹೂಡಿಕೆ (ಜಿಐಐ) ಸಂಸ್ಥೆಯು ಬೆಂಗಳೂರಿನಲ್ಲಿ ತನ್ನ ಕಚೇರಿ ತೆರೆಯಲು ನಿರ್ಧರಿಸಿದ್ದು, ಕರ್ನಾಟಕದಲ್ಲಿ ಮೂರು ವರ್ಷಗಳಲ್ಲಿ ₹ 3,500 ಕೋಟಿ ಹೂಡಿಕೆ ಮಾಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ತಿಳಿಸಿದ್ದಾರೆ.</p>.<p>ದುಬೈ ವರ್ಲ್ಡ್ ಎಕ್ಸ್ಪೋದಲ್ಲಿ ಸೋಮವಾರ ಜಿಐಐ ಸಮೂಹದ ಉದ್ದಿಮೆಗಳೊಂದಿಗೆ ರಾಜ್ಯ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದೆ. ಆ ಬಳಿಕ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ‘ಯುಎಇಯ ಪ್ರಮುಖ ಷರಿಯಾ– ಕಂಪ್ಲೈಂಟ್ ಹಣಕಾಸು ಸಂಸ್ಥೆಯಾಗಿರುವ ಜಿಐಐ ಬೆಂಗಳೂರಿನಲ್ಲಿ ತನ್ನ ಕಚೇರಿ ತೆರೆಯುವ ನಿರ್ಧಾರ ಮಾಡಿದೆ. ಆ ಮೂಲಕ ಭಾರತೀಯ ನವೋದ್ಯಮಗಳಿಗೆ ಸಹಭಾಗಿತ್ವ ನೀಡಲಿದೆ’ ಎಂದು ಹೇಳಿದ್ದಾರೆ.</p>.<p>ಜಿಐಐ ನಿರ್ಧಾರದಿಂದ ಕರ್ನಾಟಕ ಮತ್ತು ಯುಎಇ ನಡುವಣ ಸಂಬಂಧ ಮತ್ತಷ್ಟು ವೃದ್ಧಿಯಾಗಲಿದೆ. ರಾಜ್ಯದಲ್ಲಿರುವ ಹೂಡಿಕೆಯ ಅವಕಾಶಗಳನ್ನು ಯುಎಇ ಬಳಸಿಕೊಳ್ಳಲು ಅವಕಾಶ ದೊರೆಯಲಿದೆ ಎಂದು ತಿಳಿಸಿದ್ದಾರೆ.</p>.<p>ಒಪ್ಪಂದದ ಬಳಿಕ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಜಿಐಐ ಪಾಲುದಾರರಾದ ಮೊಹಮ್ಮದ್ ಅಲ್ಹಾಸನ್ ಮತ್ತು ಪಂಕಜ್ ಗುಪ್ತಾ, ‘ಭಾರತವು ಜಿಐಐಗೆ ಪ್ರಮುಖ ಹೂಡಿಕೆಯ ತಾಣವಾಗಿದೆ. ಆರಂಭಿಕ ಸುತ್ತಿನ ಮಾತುಕತೆಗಳಲ್ಲೇ ದೊಡ್ಡ ಯಶಸ್ಸು ದೊರಕಿದೆ. ₹ 1,000 ಕೋಟಿಗೂ ಹೆಚ್ಚು ವಹಿವಾಟು ನಡೆಸಲು ಜಿಐಐ ಉತ್ಸುಕವಾಗಿದೆ’ ಎಂದಿದ್ದಾರೆ.</p>.<p>ಭಾರತದ ಕಾನ್ಸಲ್ ಜನರಲ್ ಡಾ.ಅಮಾನ್ ಪುರಿ ಒಪ್ಪಂದದ ವೇಳೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>