ಅನಾರೋಗ್ಯದ ಕಾರಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ತಾಯಿಯನ್ನು ನೋಡಿಕೊಳ್ಳುವ ಸಲುವಾಗಿ ಬಾಲಕಿ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲೇ ಉಳಿದುಕೊಂಡಿದ್ದಳು. ಈ ಸಮಯದಲ್ಲಿ ವಾರ್ಡ್ ಬಾಯ್ ಪರಿಚಯವಾಗಿತ್ತು. ಶಿವಮೊಗ್ಗದಲ್ಲಿ ನಡೆದ ಘರ್ಷಣೆಯ ಕಾರಣ ನಿಷೇಧಾಜ್ಞೆ ವಿಧಿಸಿರುವುದರಿಂದ ಹೋಟೆಲ್ಗಳು ಬಂದ್ ಆಗಿದ್ದು, ಬಾಲಕಿಗೆ ಎಲ್ಲಿಯೂ ಊಟ ಸಿಕ್ಕಿರಲಿಲ್ಲ. ವಾರ್ಡ್ ಬಾಯ್ ಊಟ ಕೊಡಿ
ಸುವುದಾಗಿ ಬಾಲಕಿಯನ್ನು ನಂಬಿಸಿ ಕಾರಿನಲ್ಲಿ ಕರೆದೊಯ್ದು, ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿ ಕೃತ್ಯವನ್ನು ತಾಯಿಗೆ ತಿಳಿಸಿದ್ದಾಳೆ. ನಂತರ ಆಸ್ಪತ್ರೆ ಆವರಣದಲ್ಲಿರುವ ಸಖಿ ಕೇಂದ್ರದವರಿಗೆ ವಿಷಯ ತಿಳಿದಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.