ಈ ಬಗ್ಗೆ ಇಲಾಖೆಯ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಕಂಡಾಗ ಸಿ.ವಿ. ರಾಮನ್ ಆಸ್ಪತ್ರೆ, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ,ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಸೋಂಕಿತರು ಹಾಗೂ ಸೋಂಕು ಶಂಕಿತರ ಚಿಕಿತ್ಸೆಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಸಿಗೆಗಳನ್ನು ಮೀಸಲಿರಿಸಲಾಗಿತ್ತು. ಪ್ರಕರಣಗಳ ಸಂಖ್ಯೆ ಇಳಿಕೆ ಕಂಡ ಬಳಿಕ ಹಾಸಿಗೆಗಳ ಸಂಖ್ಯೆಯನ್ನು ಕಡಿತ ಮಾಡಲಾಗಿತ್ತು ಎಂದು ತಿಳಿಸಲಾಗಿದೆ.