ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸಿ, ನಿರ್ದೇಶಿಸಿದ್ದಾರೆ. ಕಲಾವಿದರೂ ಆಗಿರುವ ಅವರು, 50 ವರ್ಷಗಳಿಂದ ಬಯಲಾಟ ಮೇಳಗಳಲ್ಲಿ ಪಾತ್ರಧಾರಿಯಾಗಿ ಅಭಿನಯಿಸುತ್ತಿದ್ದಾರೆ. ಕೌರವ, ಭೀಮ, ಜರಾಸಂಧ ಸೇರಿದಂತೆ ವಿವಿಧ ಪೌರಾಣಿಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ತಾಳಮದ್ದಳೆ ಅರ್ಥದಾರಿಯೂ ಆಗಿದ್ದಾರೆ. ಯಕ್ಷಗಾನ ಕಲೆಗೆ ಸಂಬಂಧಿಸಿದಂತೆ ಸಂಶೋಧನೆ, ಮಾರ್ಗದರ್ಶನವನ್ನೂ ನೀಡಿದ್ದಾರೆ. ‘ಶೇಣಿ ರಾಮಾಯಣ’ ಸೇರಿದಂತೆ ವಿವಿಧ ಕೃತಿಗಳನ್ನು ರಚಿಸಿರುವ ಅವರು, ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.