ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಹಸಿದವರ ಸಂಖ್ಯೆ ಹೆಚ್ಚಳ: ಬಿಜೆಪಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

Last Updated 15 ಅಕ್ಟೋಬರ್ 2021, 8:28 IST
ಅಕ್ಷರ ಗಾತ್ರ

ಬೆಂಗಳೂರು: ‘ದಸರಾ ಹಬ್ಬದ ಸಡಗರದ ನಡುವೆ ಭಾರತದಲ್ಲಿ ಹಸಿದವರ ಸಂಖ್ಯೆ ಹೆಚ್ಚಿರುವ ವಿಷಾದಕರ ಸಂಗತಿ ಬೆಳಕಿಗೆ ಬಂದಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಭಾರತ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 94ನೇ ಸ್ಥಾನದಿಂದ 101ನೇ ಸ್ಥಾನಕ್ಕೆ ಕುಸಿದಿದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕಿಂತಲೂ ಹಸಿವು, ಅಪೌಷ್ಟಿಕತೆ ಹೊಂದಿರುವುದು ಕಳವಳಕಾರಿ ಸಂಗತಿ. ಮೋದಿಯವರ ‘ನಹೀ ಖಾನೇ ದೂಂಗಾ’ ಮಾತಿನ ಅಸಲಿ ಅರ್ಥ ಇದೇ ಏನೋ!’ ಎಂದು ವ್ಯಂಗ್ಯವಾಡಿದೆ.

ಅಪೌಷ್ಟಿಕತೆ ನಿವಾರಣೆಗಾಗಿ ಶ್ರಮಿಸುತ್ತಿರುವ 116 ರಾಷ್ಟ್ರಗಳಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಂದ ಹಿಂದುಳಿದಿದೆ.

ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿ ಬಿಡುಗಡೆಯಾಗಿದ್ದು, ಭಾರತದ ನೆರೆಯ ರಾಷ್ಟ್ರಗಳಾದ ನೇಪಾಳ 76, ಬಾಂಗ್ಲಾದೇಶ 76, ಮ್ಯಾನ್ಮಾರ್‌ 71 ಮತ್ತು ಪಾಕಿಸ್ತಾನ 92ನೇ ರ‍್ಯಾಂಕ್‌ ಪಡೆದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT