ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.2ರಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ: ನಿರಾಣಿ

Last Updated 4 ಏಪ್ರಿಲ್ 2022, 12:37 IST
ಅಕ್ಷರ ಗಾತ್ರ

ಉಡುಪಿ: ಬೆಂಗಳೂರಿನಲ್ಲಿ ನ.2 ರಿಂದ 4ರವರೆಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.

ಸೋಮವಾರ ಇಂದ್ರಾಳಿಯಲ್ಲಿ ಕೈಗಾರಿಕೋದ್ಯಮಿಗಳ ಜತೆ ಸಂವಾದ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವರು, ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೂ ಮುನ್ನ ಪ್ರತಿ ಜಿಲ್ಲೆಯಿಂದ ಕನಿಷ್ಠ 1 ಸಾವಿರ ಎಕರೆ ಹಾಗೂ ಬೆಂಗಳೂರು ಸುತ್ತಮುತ್ತ 20,000 ಎಕರೆ ಸೇರಿದಂತೆ 50,000 ಎಕರೆ ಭೂಮಿಯನ್ನು ರೈತರಿಂದ ಖರೀದಿಸಲಾಗುವುದು ಎಂದರು.

ಈ ಬಾರಿಯ ಜಿಮ್‌ ಸಮಾವೇಶದಲ್ಲಿ ಬಯೋ‌ ಟೆಕ್ನಾಲಜಿ, ಸೆಮಿ ಕಂಡಕ್ಟರ್‌, ವಿಮಾನಯಾನ ಹಾಗೂ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಕಂಪನಿಗಳು ಹೆಚ್ಚು ಭಾಗವಹಿಸುವ ನಿರೀಕ್ಷೆ ಇದೆ. ಕೋವಿಡ್‌ ಪೂರ್ವ ಸ್ಥಿತಿಗೆ ರಾಜ್ಯದ ಕೈಗಾರಿಕಾ ಉದ್ಯಮ ತಲುಪಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ವಿದ್ಯುತ್ ದರ ಹೆಚ್ಚಳ ತಾತ್ಕಾಲಿಕ:

ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಳಸುವ ಕಲ್ಲಿದ್ದಲು ದರ ಟನ್‌ಗೆ ₹ 5 ಸಾವಿರದಿಂದ ₹ 12 ಸಾವಿರಕ್ಕೆ ಹೆಚ್ಚಾಗಿರುವ ಪರಿಣಾಮ ವಿದ್ಯುತ್ ದರ ಹೆಚ್ಚಾಗಿದೆ. ದರ ಏರಿಕೆ ತಾತ್ಕಾಲಿಕವಾಗಿದ್ದು, ಕಲ್ಲಿದ್ದಲು ದರ ಇಳಿದರೆ, ವಿದ್ಯುತ್ ದರವೂ ಇಳಿಕೆಯಾಗಲಿದೆ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT