<p><strong>ಬೆಂಗಳೂರು</strong>: ‘ಎರಡು ಕೋಟಿ ಡೋಸ್ ಕೋವಿಡ್ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ಆಹ್ವಾನಿಸಿದ್ದ ಮುಕ್ತ ಅಂತರರಾಷ್ಟ್ರೀಯ ಟೆಂಡರ್ನಲ್ಲಿ ಭಾಗವಹಿಸಿದ್ದ ಎರಡೂ ಕಂಪನಿಗಳ ಪ್ರಸ್ತಾವವನ್ನು ತಿರಸ್ಕರಿಸಲಾಗಿದೆ’ ಎಂದು ರಾಜ್ಯ ಕೋವಿಡ್ ಪಡೆಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಸ್ಫುಟ್ನಿಕ್ ಲಸಿಕೆ ಪೂರೈಸಲು ಮುಂಬೈ ಮತ್ತು ದೆಹಲಿಯ ಕಂಪನಿಗಳು ಬಿಡ್ ಸಲ್ಲಿಸಿದ್ದವು. ಆದರೆ, ಈ ಕಂಪನಿಗಳು ನಮೂದಿಸಿದ್ದ ದರ ಸೇರಿದಂತೆ ಇತರ ಅಂಶಗಳು ಕಾರ್ಯಸಾಧು ಅಲ್ಲ. ಹೀಗಾಗಿ, ಟೆಂಡರ್ ಅವಧಿಯನ್ನು ಮತ್ತೆ ವಿಸ್ತರಿಸಲು ನಿರ್ಧರಿಸಲಾಗಿದೆ’ ಎಂದರು.</p>.<p>‘ಟೆಂಡರ್ನಲ್ಲಿ ಕೇವಲ ಎರಡು ಕಂಪನಿಗಳು ಭಾಗವಹಿಸಿವೆ. ಆದರೆ, ಈ ಕಂಪನಿಗಳು ಲಸಿಕೆ ತಯಾರಕರಲ್ಲ. ಲಸಿಕೆ ಸರಬರಾಜು ಮಾಡುವ ವಿತರಕರು’ ಎಂದು ಸ್ಪಷ್ಟಪಡಿಸಿದರು.</p>.<p>ಸೋಂಕು ಇಳಿಮುಖ: ‘ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಆಗುತ್ತಿದೆ. ಸೋಂಕು ದೃಢಪಡುವ ಪ್ರಮಾಣವೂ ಕಡಿಮೆಯಾಗುತ್ತಿದೆ.ಆರ್ಟಿಪಿಸಿಆರ್ ಪರೀಕ್ಷೆ ಮತ್ತು ಆರ್ಎಟಿ ಹೆಚ್ಚಿಸಲು ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಎರಡು ಕೋಟಿ ಡೋಸ್ ಕೋವಿಡ್ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ಆಹ್ವಾನಿಸಿದ್ದ ಮುಕ್ತ ಅಂತರರಾಷ್ಟ್ರೀಯ ಟೆಂಡರ್ನಲ್ಲಿ ಭಾಗವಹಿಸಿದ್ದ ಎರಡೂ ಕಂಪನಿಗಳ ಪ್ರಸ್ತಾವವನ್ನು ತಿರಸ್ಕರಿಸಲಾಗಿದೆ’ ಎಂದು ರಾಜ್ಯ ಕೋವಿಡ್ ಪಡೆಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಸ್ಫುಟ್ನಿಕ್ ಲಸಿಕೆ ಪೂರೈಸಲು ಮುಂಬೈ ಮತ್ತು ದೆಹಲಿಯ ಕಂಪನಿಗಳು ಬಿಡ್ ಸಲ್ಲಿಸಿದ್ದವು. ಆದರೆ, ಈ ಕಂಪನಿಗಳು ನಮೂದಿಸಿದ್ದ ದರ ಸೇರಿದಂತೆ ಇತರ ಅಂಶಗಳು ಕಾರ್ಯಸಾಧು ಅಲ್ಲ. ಹೀಗಾಗಿ, ಟೆಂಡರ್ ಅವಧಿಯನ್ನು ಮತ್ತೆ ವಿಸ್ತರಿಸಲು ನಿರ್ಧರಿಸಲಾಗಿದೆ’ ಎಂದರು.</p>.<p>‘ಟೆಂಡರ್ನಲ್ಲಿ ಕೇವಲ ಎರಡು ಕಂಪನಿಗಳು ಭಾಗವಹಿಸಿವೆ. ಆದರೆ, ಈ ಕಂಪನಿಗಳು ಲಸಿಕೆ ತಯಾರಕರಲ್ಲ. ಲಸಿಕೆ ಸರಬರಾಜು ಮಾಡುವ ವಿತರಕರು’ ಎಂದು ಸ್ಪಷ್ಟಪಡಿಸಿದರು.</p>.<p>ಸೋಂಕು ಇಳಿಮುಖ: ‘ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಆಗುತ್ತಿದೆ. ಸೋಂಕು ದೃಢಪಡುವ ಪ್ರಮಾಣವೂ ಕಡಿಮೆಯಾಗುತ್ತಿದೆ.ಆರ್ಟಿಪಿಸಿಆರ್ ಪರೀಕ್ಷೆ ಮತ್ತು ಆರ್ಎಟಿ ಹೆಚ್ಚಿಸಲು ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>