<p><strong>ಬೆಂಗಳೂರು: ‘</strong>ಅತಿವೃಷ್ಟಿ, ಕೋವಿಡ್ ಸೇರಿದಂತೆ ಎಲ್ಲ ಸಂಕಷ್ಟಗಳ ನಡುವೆಯೂ ಜನಮೆಚ್ಚುವ ರೀತಿಯಲ್ಲಿ ಆಡಳಿತ ನಡೆಸಿದ್ದೇವೆ. ರಾಜ್ಯಪಾಲರ ಭಾಷಣದಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ’ ಎಂದು ಕಾನೂನು ಮತ್ತು ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ ಸಮರ್ಥಿಸಿದರು.</p>.<p>ವಿಧಾನ ಪರಿಷತ್ನಲ್ಲಿ ಸಭಾಪತಿ ಪೀಠದ ಎದುರು ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗುತ್ತಿದ್ದ ನಡುವೆಯೇ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು,‘ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ’ ಎಂದರು.</p>.<p>‘ಜನರ ನಿರೀಕ್ಷೆಯಂತೆ ಅಡಳಿತ ನೀಡಿದ್ದೇವೆ. ನಾವು ಉತ್ತಮ ಆಡಳಿತ ನೀಡುತ್ತಿರುವುದಕ್ಕೆ ಉಪಚುನಾವಣೆ, ಲೋಕಸಭೆ ಚುನಾವಣೆ ಫಲಿತಾಂಶಗಳೇ ಸಾಕ್ಷಿ. ಆರ್ಥಿಕ ಸ್ಥಿತಿ ಸುಧಾರಣೆಯಾಗಿದ್ದು, ರಾಜಸ್ವ ಸಂಗ್ರಹವೂ ಉತ್ತಮವಾಗಿದೆ. ತೆರಿಗೆ ಸಂಗ್ರಹ ಸಮರ್ಪಕವಾಗಿ ನಡೆಯುತ್ತಿದೆ’ ಎಂದರು.</p>.<p>‘ಅಭಿವೃದ್ಧಿಗೆ ಯಾವುದೇ ಹಿನ್ನಡೆ ಆಗಿಲ್ಲ. ಬಜೆಟ್ನಲ್ಲಿ ನೀಡಿದ ಭರವಸೆಯಲ್ಲಿ ಶೇ 85ರಷ್ಟು ಈಡೇರಿಸಿದ್ದೇವೆ. ನಮ್ಮ ಭರವಸೆ ಈಡೇರಿಕೆಗೆ ಬದ್ಧವಾಗಿದ್ದೇವೆ. ಕೇಂದ್ರದಿಂದ ₹ 28 ಸಾವಿರ ಕೋಟಿ ಬರುವ ನಿರೀಕ್ಷೆ ಇದೆ. ₹ 48 ಸಾವಿರ ಕೋಟಿ ಸಾಲದ ನೀಡಿದೆ. ಇದನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಆಡಳಿತ ನಡೆಸಿದವರು ದೊಡ್ಡ ಮೊತ್ತದ ಸಾಲದ ಹೊರೆ ಹೊರಿಸಿದ್ದಾರೆ’ ಎಂದು ಹಿಂದಿನ ಸರ್ಕಾರಗಳ ಆಡಳಿತ ವೈಖರಿಯನ್ನು ಬೊಮ್ಮಾಯಿ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಅತಿವೃಷ್ಟಿ, ಕೋವಿಡ್ ಸೇರಿದಂತೆ ಎಲ್ಲ ಸಂಕಷ್ಟಗಳ ನಡುವೆಯೂ ಜನಮೆಚ್ಚುವ ರೀತಿಯಲ್ಲಿ ಆಡಳಿತ ನಡೆಸಿದ್ದೇವೆ. ರಾಜ್ಯಪಾಲರ ಭಾಷಣದಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ’ ಎಂದು ಕಾನೂನು ಮತ್ತು ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ ಸಮರ್ಥಿಸಿದರು.</p>.<p>ವಿಧಾನ ಪರಿಷತ್ನಲ್ಲಿ ಸಭಾಪತಿ ಪೀಠದ ಎದುರು ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗುತ್ತಿದ್ದ ನಡುವೆಯೇ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು,‘ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ’ ಎಂದರು.</p>.<p>‘ಜನರ ನಿರೀಕ್ಷೆಯಂತೆ ಅಡಳಿತ ನೀಡಿದ್ದೇವೆ. ನಾವು ಉತ್ತಮ ಆಡಳಿತ ನೀಡುತ್ತಿರುವುದಕ್ಕೆ ಉಪಚುನಾವಣೆ, ಲೋಕಸಭೆ ಚುನಾವಣೆ ಫಲಿತಾಂಶಗಳೇ ಸಾಕ್ಷಿ. ಆರ್ಥಿಕ ಸ್ಥಿತಿ ಸುಧಾರಣೆಯಾಗಿದ್ದು, ರಾಜಸ್ವ ಸಂಗ್ರಹವೂ ಉತ್ತಮವಾಗಿದೆ. ತೆರಿಗೆ ಸಂಗ್ರಹ ಸಮರ್ಪಕವಾಗಿ ನಡೆಯುತ್ತಿದೆ’ ಎಂದರು.</p>.<p>‘ಅಭಿವೃದ್ಧಿಗೆ ಯಾವುದೇ ಹಿನ್ನಡೆ ಆಗಿಲ್ಲ. ಬಜೆಟ್ನಲ್ಲಿ ನೀಡಿದ ಭರವಸೆಯಲ್ಲಿ ಶೇ 85ರಷ್ಟು ಈಡೇರಿಸಿದ್ದೇವೆ. ನಮ್ಮ ಭರವಸೆ ಈಡೇರಿಕೆಗೆ ಬದ್ಧವಾಗಿದ್ದೇವೆ. ಕೇಂದ್ರದಿಂದ ₹ 28 ಸಾವಿರ ಕೋಟಿ ಬರುವ ನಿರೀಕ್ಷೆ ಇದೆ. ₹ 48 ಸಾವಿರ ಕೋಟಿ ಸಾಲದ ನೀಡಿದೆ. ಇದನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಆಡಳಿತ ನಡೆಸಿದವರು ದೊಡ್ಡ ಮೊತ್ತದ ಸಾಲದ ಹೊರೆ ಹೊರಿಸಿದ್ದಾರೆ’ ಎಂದು ಹಿಂದಿನ ಸರ್ಕಾರಗಳ ಆಡಳಿತ ವೈಖರಿಯನ್ನು ಬೊಮ್ಮಾಯಿ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>