<p><strong>ಬೆಂಗಳೂರು: </strong>ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ನಗರ ಪ್ರದೇಶಗಳ ಕೊಳೆಗೇರಿಗಳಲ್ಲಿ ವಾಸಿಸುವವರಿಗೆ ಹಕ್ಕುಪತ್ರ ಪಡೆಯಲು ನಿಗದಿಪಡಿಸಿದ್ದ ದರವನ್ನು ಶೇ 50ಕ್ಕಿಂತ ಹೆಚ್ಚು ಕಡಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.</p>.<p>ರಾಜ್ಯದ 1873 ಕೊಳೆಗೇರಿಗಳಲ್ಲಿ ವಾಸ ಮಾಡುತ್ತಿರುವ 15,83,134 ಜನರನ್ನು ಒಳಗೊಂಡ 3,12.969 ಕುಟುಂಬಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.</p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ 600 ಚದರಡಿ ವಿಸ್ತೀರ್ಣದವರೆಗ ಮನೆ ಅಥವಾ ಗುಡಿಸಲು ಹೊಂದಿದ್ದವರಿಗೆ ಹಕ್ಕುಪತ್ರ ಪಡೆಯಲು ಸಾಮಾನ್ಯವರ್ಗದವರಿಗೆ ₹10 ಸಾವಿರ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ(ಎಸ್ಸಿಎಸ್ಟಿ) ₹5 ಸಾವಿರ ವಿಧಿಸಲಾಗುತ್ತಿತ್ತು. ಅದನ್ನು ಕ್ರಮವಾಗಿ ₹4 ಸಾವಿರ ಹಾಗೂ ₹2 ಸಾವಿರಕ್ಕೆ ಇಳಿಸಲಾಗಿದೆ.</p>.<p>ನಗರಸಭೆ ವ್ಯಾಪ್ತಿಯಲ್ಲಿ 600 ಚದರ ಅಡಿಗಳ ವಿಸ್ತೀರ್ಣದವರೆಗೂ ಈ ಹಿಂದೆ ಇದ್ದ ₹ 4 ಸಾವಿರ ಹಾಗೂ ಎಸ್ಸಿಎಸ್ಟಿ ಸಮುದಾಯದವರಿಗೆ ₹2 ಸಾವಿರ ದರವನ್ನು ಕ್ರಮವಾಗಿ ₹2 ಸಾವಿರ ಹಾಗೂ ₹1 ಸಾವಿರಕ್ಕೆ ಇಳಿಸಲಾಗಿದೆ.</p>.<p>ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಕ್ಕುಪತ್ರಗಳನ್ನು ಪಡೆಯಲು 1200 ಚದರ ಅಡಿಗಳವರೆಗೆ ₹3 ಸಾವಿರ ಎಸ್ಸಿಎಸ್ಟಿ ಸಮುದಾಯದವರಿಗೆ ₹1,500 ನಿಗದಿ ಮಾಡಲಾಗಿತ್ತು. ಅದನ್ನು ಕ್ರಮವಾಗಿ ₹2ಸಾವಿರ ಹಾಗೂ ₹1 ಸಾವಿರಕ್ಕೆ ಇಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>‘ಹಕ್ಕುಪತ್ರಗಳನ್ನು ಪಡೆದುಕೊಳ್ಳಲು ಈ ಹಿಂದೆ ನಿಗದಿ ಪಡಿಸಿದ್ದ ದರಗಳು ಹೆಚ್ಚಾಗಿದ್ದು, ಬಡ ಕುಟುಂಬಗಳ ಹೊರೆಯನ್ನು ಕಡಿಮೆ ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೋರಲಾಗಿತ್ತು. ಅದಕ್ಕೆ ಮುಖ್ಯಮಂತ್ರಿ ಅವರು ಸ್ಪಂದಿಸಿದ್ದು, ಕೊಳೆಗೇರಿಗಳಲ್ಲಿ ವಾಸಿಸುವ ಬಡವರಿಗೆ ಇದರಿಂದ ಸಹಾಯವಾಗಲಿದೆ’ ಎಂದು ಸೋಮಣ್ಣ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ನಗರ ಪ್ರದೇಶಗಳ ಕೊಳೆಗೇರಿಗಳಲ್ಲಿ ವಾಸಿಸುವವರಿಗೆ ಹಕ್ಕುಪತ್ರ ಪಡೆಯಲು ನಿಗದಿಪಡಿಸಿದ್ದ ದರವನ್ನು ಶೇ 50ಕ್ಕಿಂತ ಹೆಚ್ಚು ಕಡಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.</p>.<p>ರಾಜ್ಯದ 1873 ಕೊಳೆಗೇರಿಗಳಲ್ಲಿ ವಾಸ ಮಾಡುತ್ತಿರುವ 15,83,134 ಜನರನ್ನು ಒಳಗೊಂಡ 3,12.969 ಕುಟುಂಬಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.</p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ 600 ಚದರಡಿ ವಿಸ್ತೀರ್ಣದವರೆಗ ಮನೆ ಅಥವಾ ಗುಡಿಸಲು ಹೊಂದಿದ್ದವರಿಗೆ ಹಕ್ಕುಪತ್ರ ಪಡೆಯಲು ಸಾಮಾನ್ಯವರ್ಗದವರಿಗೆ ₹10 ಸಾವಿರ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ(ಎಸ್ಸಿಎಸ್ಟಿ) ₹5 ಸಾವಿರ ವಿಧಿಸಲಾಗುತ್ತಿತ್ತು. ಅದನ್ನು ಕ್ರಮವಾಗಿ ₹4 ಸಾವಿರ ಹಾಗೂ ₹2 ಸಾವಿರಕ್ಕೆ ಇಳಿಸಲಾಗಿದೆ.</p>.<p>ನಗರಸಭೆ ವ್ಯಾಪ್ತಿಯಲ್ಲಿ 600 ಚದರ ಅಡಿಗಳ ವಿಸ್ತೀರ್ಣದವರೆಗೂ ಈ ಹಿಂದೆ ಇದ್ದ ₹ 4 ಸಾವಿರ ಹಾಗೂ ಎಸ್ಸಿಎಸ್ಟಿ ಸಮುದಾಯದವರಿಗೆ ₹2 ಸಾವಿರ ದರವನ್ನು ಕ್ರಮವಾಗಿ ₹2 ಸಾವಿರ ಹಾಗೂ ₹1 ಸಾವಿರಕ್ಕೆ ಇಳಿಸಲಾಗಿದೆ.</p>.<p>ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಕ್ಕುಪತ್ರಗಳನ್ನು ಪಡೆಯಲು 1200 ಚದರ ಅಡಿಗಳವರೆಗೆ ₹3 ಸಾವಿರ ಎಸ್ಸಿಎಸ್ಟಿ ಸಮುದಾಯದವರಿಗೆ ₹1,500 ನಿಗದಿ ಮಾಡಲಾಗಿತ್ತು. ಅದನ್ನು ಕ್ರಮವಾಗಿ ₹2ಸಾವಿರ ಹಾಗೂ ₹1 ಸಾವಿರಕ್ಕೆ ಇಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>‘ಹಕ್ಕುಪತ್ರಗಳನ್ನು ಪಡೆದುಕೊಳ್ಳಲು ಈ ಹಿಂದೆ ನಿಗದಿ ಪಡಿಸಿದ್ದ ದರಗಳು ಹೆಚ್ಚಾಗಿದ್ದು, ಬಡ ಕುಟುಂಬಗಳ ಹೊರೆಯನ್ನು ಕಡಿಮೆ ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೋರಲಾಗಿತ್ತು. ಅದಕ್ಕೆ ಮುಖ್ಯಮಂತ್ರಿ ಅವರು ಸ್ಪಂದಿಸಿದ್ದು, ಕೊಳೆಗೇರಿಗಳಲ್ಲಿ ವಾಸಿಸುವ ಬಡವರಿಗೆ ಇದರಿಂದ ಸಹಾಯವಾಗಲಿದೆ’ ಎಂದು ಸೋಮಣ್ಣ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>