ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲ ಗೆಹಲೋತ್ ಪ್ರಮಾಣ ವಚನ ನಾಳೆ

Last Updated 9 ಜುಲೈ 2021, 22:22 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಥಾವರಚಂದ್ ಗೆಹಲೋತ್ ಅವರು ರಾಜ್ಯದ ನೂತನ ರಾಜ್ಯಪಾಲರಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ಭಾನುವಾರ ಬೆಳಿಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

ಹಾಲಿ ರಾಜ್ಯಪಾಲ ವಜುಭಾಯಿ ವಾಲಾ ಅವರ ಅವಧಿ ಪೂರ್ಣಗೊಂಡಿದೆ. ಅವರ ಸ್ಥಾನಕ್ಕೆ ಥಾವರಚಂದ್ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯಪಾಲರಾಗಿ ನೇಮಕಗೊಂಡ ಬಳಿಕ ಅವರು, ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಸ್ಥಾನ ಹಾಗೂ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ
ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT