ಆರೋಗ್ಯ ಸಚಿವ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಗುಳೂರು ಶ್ರೀನಿವಾಸ್, ಮುಷ್ಕರ ಹಿಂಪಡೆಯುವ ನಿರ್ಧಾರ ಪ್ರಕಟಿಸಿದರು. ಇದೇ 21ರಂದು ಹಮ್ಮಿಕೊಂಡಿದ್ದ ವೈದ್ಯರ ಬೆಂಗಳೂರು ಚಲೋ ರ್ಯಾಲಿಯನ್ನು ರದ್ದುಗೊಳಿಸಿರುವುದಾಗಿಯೂ ತಿಳಿಸಿದರು.