;ಸರ್ಕಾರವು ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಂಘದ ಅಧ್ಯಕ್ಷ ಡಾ.ಜಿ.ಎ. ಶ್ರೀನಿವಾಸ್ ನೇತೃತ್ವದಲ್ಲಿ ಶನಿವಾರ ಸಭೆ ನಡೆಸಿ ವೈದ್ಯರು, ಆನ್ಲೈನ್ ಸಹಿತ ಎಲ್ಲ ಸರ್ಕಾರಿ ಸಭೆಗಳಿಂದ ದೂರ ಉಳಿಯುವ ತೀರ್ಮಾನಕ್ಕೆ ಬಂದಿದ್ದಾರೆ. ಅದೇ ರೀತಿ, ವೈದ್ಯಕೀಯ ಚಿಕಿತ್ಸೆಗಳ ವರದಿ ಸೇರಿದಂತೆ ಯಾವುದೇ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸದಿರಲು ನಿರ್ಧರಿಸಿದ್ದಾರೆ. ಕರ್ತವ್ಯಕ್ಕೆ ಹಾಜರಾಗಿ, ಎಲ್ಲ ರೀತಿಯ ವೈದ್ಯಕೀಯ ಸೇವೆಯನ್ನು ಮುಂದುವರೆಸಲಿದ್ದೇವೆ’ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.