ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ₹ 25 ಸಾವಿರಕ್ಕೆ ಹೆಚ್ಚಳ

Last Updated 14 ಡಿಸೆಂಬರ್ 2021, 21:56 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ಕಾಯಂ ನೌಕರರಿಗೆ ಪ್ರತಿ ಆರ್ಥಿಕ ವರ್ಷದಲ್ಲಿ ಒಂದು ಬಾರಿ ಬಡ್ಡಿ ರಹಿತವಾಗಿ ನೀಡುವ ಹಬ್ಬದ ಮುಂಗಡವನ್ನು ₹ 25,000ಕ್ಕೆ ಹೆಚ್ಚಿಸಿ ಹಣಕಾಸು ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.

ಅಖಿಲ ಭಾರತ ಸೇವೆಯ ಅಧಿಕಾರಿಗಳೂ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲ ಕಾಯಂ ನೌಕರರಿಗೂ ಈ ಸೌಲಭ್ಯವಿದೆ. ಈವರೆಗೂ ವರ್ಷಕ್ಕೆ ಒಂದು ಬಾರಿ ₹ 10,000 ಹಬ್ಬದ ಮುಂಗಡ ನೀಡಲಾಗುತ್ತಿತ್ತು. ಈ ಮಿತಿಯನ್ನು ₹ 25,000ಕ್ಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿತ್ತು. ಅದನ್ನು ಪುರಸ್ಕರಿಸಿರುವ ಆರ್ಥಿಕ ಇಲಾಖೆ, ಹಬ್ಬದ ಮುಂಗಡದ ಮಿತಿಯನ್ನು ಹೆಚ್ಚಿಸಿದೆ.

‘ರಾಜ್ಯ ಸರ್ಕಾರದಲ್ಲಿ ಒಟ್ಟು 5.25 ಲಕ್ಷ ಕಾಯಂ ನೌಕರರಿದ್ದಾರೆ. ಮಿತಿಯನ್ನು ಹೆಚ್ಚಿಸಿರುವ ಆದೇಶದಿಂದ ‘ಸಿ’ ಮತ್ತು ‘ಡಿ’ ದರ್ಜೆ ನೌಕರರಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT