<p><strong>ಬೆಂಗಳೂರು:</strong> ರಾಜ್ಯದಾದ್ಯಂತ ಇದೇ 7ರಿಂದ 15ರವರೆಗೆ ನಡೆಯಲಿರುವ ನಾಡಹಬ್ಬ ದಸರಾ, ದುರ್ಗಾ ಪೂಜೆ ಆಚರಣೆ ವೇಳೆ ಮೈಸೂರು ಬಿಟ್ಟು ಉಳಿದ ಕಡೆಗಳಲ್ಲಿ 400ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ವ್ಯಕ್ತಿಗತ ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದೆ.</p>.<p>ಅಲ್ಲದೆ, ದಸರಾ ಆಚರಣೆಯಲ್ಲಿ ವ್ಯಕ್ತಿಗತ ಅಂತರ ಇಲ್ಲದೆ ನಡೆಯುವ ಕಾರ್ಯಕ್ರಮಗಳಿಗೂ ನಿಷೇಧ ಹೇರಲಾಗಿದೆ. ಕೋವಿಡ್ ಸೋಂಕು ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವರ್ಷ ಕೂಡಾ ದಸರಾವನ್ನು ಅತ್ಯಂತ ಸರಳವಾಗಿ ಆಚರಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಮಂಗಳವಾರ ಮಾರ್ಗಸೂಚಿ ಹೊರಡಿಸಿದ್ದಾರೆ.</p>.<p><strong>ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ: </strong>ಮೈಸೂರು ದಸರಾ ಹಬ್ಬದ ಆಚರಣೆಯನ್ನು ದೃಶ್ಯ ಸಂವಹನ (ವರ್ಚುವಲ್) ಮೂಲಕ ವೀಕ್ಷಿಸಲು ಅವಕಾಶ ಕಲ್ಪಿಸಿರುವುದರಿಂದ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.</p>.<p>7ರಂದು ಚಾಮುಂಡಿ ಬೆಟ್ಟದಲ್ಲಿ ಮುಖ್ಯಮಂತ್ರಿ ಮತ್ತು ಗಣ್ಯರಿಂದ ಮೈಸೂರು ದಸರಾ ಉದ್ಘಾಟನೆ ನಡೆಯಲಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ಮಾಧ್ಯಮದವರು ಸೇರಿ 100 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. 15ರಂದು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿಯಲ್ಲಿ 500 ಜನರಿಗೆ ಮಾತ್ರ ಪ್ರವೇಶ ಅವಕಾಶ ನೀಡಲಾಗಿದೆ.</p>.<p>7ರಿಂದ 15ರವರೆಗೆ ಅರಮನೆ ಆವರಣದಲ್ಲಿ ಸಂಜೆ ನಡೆಯಲಿರುವ 2 ಗಂಟೆ ಅವಧಿಯ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಗರಿಷ್ಠ 500 ಜನರಿಗೆ ಅನುಮತಿ ನೀಡಲಾಗಿದೆ.</p>.<p>ಆಚರಣೆಯಲ್ಲಿ ಭಾಗವಹಿಸುವವರು ಅ. 4ರ ನಂತರ ಕೋವಿಡ್ ತಪಾಸಣೆ (ಆರ್ಟಿಪಿಸಿಆರ್) ನಡೆಸಿ ಸೋಂಕು ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ ಪಡೆಯಲೇಬೇಕು. ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು.</p>.<p>ಮಾಸ್ಕ್ ಧರಿಸದವರ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು. ಈ ಷರತ್ತುಗಳಲ್ಲದೆ, ಹಬ್ಬದ ಆಚರಣೆಗೆ ಅಗತ್ಯವಾದ ಸುರಕ್ಷತಾ ಕ್ರಮಗಳನ್ನು ಜಿಲ್ಲಾಡಳಿತ ವಹಿಸಬೇಕು ಎಂದೂ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಾದ್ಯಂತ ಇದೇ 7ರಿಂದ 15ರವರೆಗೆ ನಡೆಯಲಿರುವ ನಾಡಹಬ್ಬ ದಸರಾ, ದುರ್ಗಾ ಪೂಜೆ ಆಚರಣೆ ವೇಳೆ ಮೈಸೂರು ಬಿಟ್ಟು ಉಳಿದ ಕಡೆಗಳಲ್ಲಿ 400ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ವ್ಯಕ್ತಿಗತ ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದೆ.</p>.<p>ಅಲ್ಲದೆ, ದಸರಾ ಆಚರಣೆಯಲ್ಲಿ ವ್ಯಕ್ತಿಗತ ಅಂತರ ಇಲ್ಲದೆ ನಡೆಯುವ ಕಾರ್ಯಕ್ರಮಗಳಿಗೂ ನಿಷೇಧ ಹೇರಲಾಗಿದೆ. ಕೋವಿಡ್ ಸೋಂಕು ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವರ್ಷ ಕೂಡಾ ದಸರಾವನ್ನು ಅತ್ಯಂತ ಸರಳವಾಗಿ ಆಚರಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಮಂಗಳವಾರ ಮಾರ್ಗಸೂಚಿ ಹೊರಡಿಸಿದ್ದಾರೆ.</p>.<p><strong>ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ: </strong>ಮೈಸೂರು ದಸರಾ ಹಬ್ಬದ ಆಚರಣೆಯನ್ನು ದೃಶ್ಯ ಸಂವಹನ (ವರ್ಚುವಲ್) ಮೂಲಕ ವೀಕ್ಷಿಸಲು ಅವಕಾಶ ಕಲ್ಪಿಸಿರುವುದರಿಂದ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.</p>.<p>7ರಂದು ಚಾಮುಂಡಿ ಬೆಟ್ಟದಲ್ಲಿ ಮುಖ್ಯಮಂತ್ರಿ ಮತ್ತು ಗಣ್ಯರಿಂದ ಮೈಸೂರು ದಸರಾ ಉದ್ಘಾಟನೆ ನಡೆಯಲಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ಮಾಧ್ಯಮದವರು ಸೇರಿ 100 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. 15ರಂದು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿಯಲ್ಲಿ 500 ಜನರಿಗೆ ಮಾತ್ರ ಪ್ರವೇಶ ಅವಕಾಶ ನೀಡಲಾಗಿದೆ.</p>.<p>7ರಿಂದ 15ರವರೆಗೆ ಅರಮನೆ ಆವರಣದಲ್ಲಿ ಸಂಜೆ ನಡೆಯಲಿರುವ 2 ಗಂಟೆ ಅವಧಿಯ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಗರಿಷ್ಠ 500 ಜನರಿಗೆ ಅನುಮತಿ ನೀಡಲಾಗಿದೆ.</p>.<p>ಆಚರಣೆಯಲ್ಲಿ ಭಾಗವಹಿಸುವವರು ಅ. 4ರ ನಂತರ ಕೋವಿಡ್ ತಪಾಸಣೆ (ಆರ್ಟಿಪಿಸಿಆರ್) ನಡೆಸಿ ಸೋಂಕು ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ ಪಡೆಯಲೇಬೇಕು. ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು.</p>.<p>ಮಾಸ್ಕ್ ಧರಿಸದವರ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು. ಈ ಷರತ್ತುಗಳಲ್ಲದೆ, ಹಬ್ಬದ ಆಚರಣೆಗೆ ಅಗತ್ಯವಾದ ಸುರಕ್ಷತಾ ಕ್ರಮಗಳನ್ನು ಜಿಲ್ಲಾಡಳಿತ ವಹಿಸಬೇಕು ಎಂದೂ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>