ಕೋವಿಡ್ ಪ್ರಕರಣಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ಅವರನ್ನು ಒಳಗೊಂಡ ವಿಶೇಷ ವಿಭಾಗೀಯದ ಪೀಠ, ಕೋವಿಡ್ ಎರಡನೇ ಅಲೆ ಬಗ್ಗೆ ಮಾಹಿತಿ ಇದ್ದರೂ ಸಜ್ಜಾಗದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹಾಸಿಗೆಗಳ ಅವಶ್ಯಕತೆ ಮತ್ತು ಸಾಮರ್ಥ್ಯ ಹೆಚ್ಚಿಸಲು ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆಯೂ ತಿಳಿಸಿದೆ.