ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ ಪರಿಹಾರ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Last Updated 9 ನವೆಂಬರ್ 2020, 12:37 IST
ಅಕ್ಷರ ಗಾತ್ರ

ಬೆಂಗಳೂರು: ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ.‌ ಹೀಗಿದ್ದರೂ ಬಿಎಸ್‌ವೈ ನೇತೃತ್ವದ ಸರ್ಕಾರ ಕೇಂದ್ರದ ಬಳಿ ಹೆಚ್ಚು ಪರಿಹಾರ ಕೇಳದೇ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರವಾಗಿ ಸೋಮವಾರ ಸರಣಿ ಟ್ವೀಟ್‌ ಮಾಡಿರುವ ಅವರು, 'ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ.‌ ಹೀಗಿದ್ದರೂ ಬಿಎಸ್‌ವೈ ನೇತೃತ್ವದ ಸರ್ಕಾರ ಕೇಂದ್ರದ ಬಳಿ ಹೆಚ್ಚು ಪರಿಹಾರ ಕೇಳದೇ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. ಬಿ.ಎಸ್‌.ಯಡಿಯೂರಪ್ಪನವರು ತಕ್ಷಣ ಮರುಸಮೀಕ್ಷೆಗೆ ಆದೇಶಿಸಿ ವೈಜ್ಞಾನಿಕವಾಗಿ ನಷ್ಟದ ಅಂದಾಜು ಮಾಡಬೇಕು' ಎಂದು ಒತ್ತಾಯಿಸಿದ್ದಾರೆ.

'ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ₹25,518 ಕೋಟಿ ಪರಿಹಾರ ಕೇಳಿದ್ದ ಮುಖ್ಯಮಂತ್ರಿಗಳು, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ₹24,941.73 ಕೋಟಿ ಪರಿಹಾರ ಕೇಳಿರುವುದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಲ್ಲವೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

'ಕಳೆದ ವರ್ಷ ₹25,518 ಕೋಟಿ ಪರಿಹಾರ ಕೇಳಿದರೂ ಪ್ರಧಾನಿ ಮೋದಿ ನೀಡಿರುವುದು ₹1652 ಕೋಟಿ ಮಾತ್ರ. ರಾಜ್ಯ ಸರ್ಕಾರ ಸಮರ್ಪಕ ಸಮೀಕ್ಷಾ ವರದಿ ಮೂಲಕ ಪ್ರಧಾನಿ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ' ಎಂದು ಅವರು ಹೇಳಿದ್ದಾರೆ.

'ಮಳೆ ಮತ್ತು ಪ್ರವಾಹ ಬಂದು ಮೂರು ತಿಂಗಳುಗಳಾಗುತ್ತಾ ಬಂದರೂ ಇಲ್ಲಿಯವರೆಗೆ 51,812 ಸಂತ್ರಸ್ಥರಿಗೆ ನೀಡಿರುವ ಪರಿಹಾರ ಕೇವಲ ₹36,57,79,972 ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ 85,996 ಸಂತ್ರಸ್ತರಿಗೆ ₹70,70,87,961 ಪರಿಹಾರ ಇನ್ನಷ್ಟೇ ನೀಡಬೇಕಾಗಿದೆ. ಹೀಗಾದರೇ, ಉಳಿದವರ ಗತಿ ಏನು‌?' ಎಂದು ರಾಜ್ಯ ಸರ್ಕಾರವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT