ಕೋವಿಡ್ ಎರಡನೇ ಅಲೆ ಸ್ಫೋಟಗೊಂಡಿರುವ ಸಂದರ್ಭದಲ್ಲಿ ಸೋಂಕಿತರ ಚಿಕಿತ್ಸೆಗೆ ನೆರವಾಗುವಂತೆ ಕಾಂಗ್ರೆಸ್ನ ಎಲ್ಲ ಶಾಸಕರಿಗೂ ಶುಕ್ರವಾರ ಬರೆದಿರುವ ಪತ್ರದಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಅವರು, ‘ಎರಡನೇ ಅಲೆ ಸ್ಫೋಟಗೊಳ್ಳಲಿದೆ ಎಂದು ತಜ್ಞರು ಸಾಕಷ್ಟು ಮುಂಚೆ ಎಚ್ಚರಿಕೆ ನೀಡಿದ್ದರು. ಅಗತ್ಯ ಪ್ರಮಾಣದ ಪ್ರಯೋಗಾಲಯ, ಆಸ್ಪತ್ರೆಗಳನ್ನು ಸಜ್ಜುಗೊಳಿಸಿ ಹಾಸಿಗೆ, ಆಮ್ಲಜನಕ, ಐಸಿಯು, ವೆಂಟಿಲೇಟರ್, ಔಷಧಿಯ ವ್ಯವಸ್ಥೆ ಮಾಡಿದ್ದರೆ ಈ ಪ್ರಮಾಣದ ಸಾವುಗಳು ಸಂಭವಿಸುತ್ತಿರಲಿಲ್ಲ’ ಎಂದು ಹೇಳಿದ್ದಾರೆ.