<p><strong>ಬೆಂಗಳೂರು:</strong> ಎರಡನೇ ಹಂತದ ನಗರಗಳಿಗೆ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು(ಐಟಿ) ವಿಸ್ತರಿಸುವ ಗುರಿ ಮತ್ತು ಅದಕ್ಕೆ ಪೂರಕವಾದ ಹೊಸ ‘ಐಟಿ ನೀತಿ 2020-25’ ಅನ್ನು ರಾಜ್ಯ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ.</p>.<p>ನೀತಿ ಬಿಡುಗಡೆ ಮಾಡಿ ಮಾತನಾಡಿದ ಐಟಿ –ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ‘ರಾಜ್ಯದ ವಿವಿಧ ನಗರಗಳಲ್ಲಿ ಐಟಿ ಕಂಪನಿಗಳ ಸ್ಥಾಪನೆ, ಅದಕ್ಕೆ ಬೇಕಾದ ಮೂಲಸೌಕರ್ಯಗಳನ್ನು ಕಲ್ಪಿಸುವುದು, ಮಾನವ ಸಂಪನ್ಮೂಲ ಹಾಗೂ ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಅಂಶಗಳನ್ನು ನೀತಿ ಒಳಗೊಂಡಿದೆ’ ಎಂದರು.</p>.<p>ಐಟಿ-ಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಇ.ವಿ.ರಮಣರೆಡ್ಡಿ, ‘ಬೆಂಗಳೂರಿನ ಹೊರಗೂ ಐಟಿ ಕ್ಷೇತ್ರಕ್ಕೆ ಅತ್ಯುತ್ತಮ ಅವಕಾಶಗಳಿವೆ. ಶ್ರೇಷ್ಠ ಮಾನವ ಸಂಪನ್ಮೂಲವೂ ಸಿಗುತ್ತಿದೆ. ಮೇಲಾಗಿ ಯಾವುದಾದರೂ ಸಮಸ್ಯೆ ಎದುರಾದರೂ ಸಕಾಲಕ್ಕೆ ಮಧ್ಯಪ್ರವೇಶಿಸಿ ಅದಕ್ಕೆ ಪರಿಹಾರೋಪಾಯ ಕಂಡುಕೊಳ್ಳಲು ಸರ್ಕಾರ ಸದಾ ಸಿದ್ಧವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎರಡನೇ ಹಂತದ ನಗರಗಳಿಗೆ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು(ಐಟಿ) ವಿಸ್ತರಿಸುವ ಗುರಿ ಮತ್ತು ಅದಕ್ಕೆ ಪೂರಕವಾದ ಹೊಸ ‘ಐಟಿ ನೀತಿ 2020-25’ ಅನ್ನು ರಾಜ್ಯ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ.</p>.<p>ನೀತಿ ಬಿಡುಗಡೆ ಮಾಡಿ ಮಾತನಾಡಿದ ಐಟಿ –ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ‘ರಾಜ್ಯದ ವಿವಿಧ ನಗರಗಳಲ್ಲಿ ಐಟಿ ಕಂಪನಿಗಳ ಸ್ಥಾಪನೆ, ಅದಕ್ಕೆ ಬೇಕಾದ ಮೂಲಸೌಕರ್ಯಗಳನ್ನು ಕಲ್ಪಿಸುವುದು, ಮಾನವ ಸಂಪನ್ಮೂಲ ಹಾಗೂ ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಅಂಶಗಳನ್ನು ನೀತಿ ಒಳಗೊಂಡಿದೆ’ ಎಂದರು.</p>.<p>ಐಟಿ-ಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಇ.ವಿ.ರಮಣರೆಡ್ಡಿ, ‘ಬೆಂಗಳೂರಿನ ಹೊರಗೂ ಐಟಿ ಕ್ಷೇತ್ರಕ್ಕೆ ಅತ್ಯುತ್ತಮ ಅವಕಾಶಗಳಿವೆ. ಶ್ರೇಷ್ಠ ಮಾನವ ಸಂಪನ್ಮೂಲವೂ ಸಿಗುತ್ತಿದೆ. ಮೇಲಾಗಿ ಯಾವುದಾದರೂ ಸಮಸ್ಯೆ ಎದುರಾದರೂ ಸಕಾಲಕ್ಕೆ ಮಧ್ಯಪ್ರವೇಶಿಸಿ ಅದಕ್ಕೆ ಪರಿಹಾರೋಪಾಯ ಕಂಡುಕೊಳ್ಳಲು ಸರ್ಕಾರ ಸದಾ ಸಿದ್ಧವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>