ಎರಡೂ ರಾಷ್ಟ್ರೀಯ ಪಕ್ಷಗಳ ಸರ್ಕಾರಗಳು ಇದ್ದಾಗ ಮೇಕೆದಾಟು ಯೋಜನೆ ರೂಪಿಸಲು ಸಾಧ್ಯವಾಗಿರಲಿಲ್ಲ. ತಮ್ಮ ಸರ್ಕಾರ ಅದನ್ನು ಜಾರಿಗೆ ತರುವ ಧೈರ್ಯ ತೋರಿತು. ರಾಜ್ಯ ಮತ್ತು ಕೇಂದ್ರ ಎರಡೂ ಕಡೆ ಬಿಜೆಪಿ ಸರ್ಕಾರ ಇದ್ದರೂ ಯೋಜನೆಗೆ ಅನಿಶ್ಚಿತತೆ ಎದುರಾಗಿದೆ. ಸರ್ಕಾರ ನಡೆಸಲಾಗದೆ ನಲುಗಿ ಹೋಗಿರುವ ಬಿಜೆಪಿಗೆ ನೆಲ, ಜಲ, ಭಾಷೆಯ ಬಗ್ಗೆ ಅಕ್ಕರೆ ಇದೆಯೆ ಎಂದು ಪ್ರಶ್ನಿಸಿದ್ದಾರೆ.