ವಿಧಾನಸೌಧದಲ್ಲಿರುವ ತಮ್ಮ ಕಚೇರಿಗೆ ಶುಕ್ರವಾರ ಪೂಜೆ ಸಲ್ಲಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಲಬುರ್ಗಿಯ ಸಿಮೆಂಟ್ ಕಾರ್ಪೋರೇಷನ್, ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ, ಮಂಡ್ಯದ ಮೈಷುಗರ್ಸ್ ಸಕ್ಕರೆ ಕಾರ್ಖಾನೆ ಸೇರಿದಂತೆ ಸರ್ಕಾರಿ ಸ್ವಾಮ್ಯದ ಹಲವು ಉದ್ದಿಮೆಗಳು, ನಿಗಮಗಳು ರೋಗಗ್ರಸ್ತವಾಗಿವೆ. ಅವುಗಳಿಂದ ಸರ್ಕಾರದ ಬಂಡವಾಳ ಹಿಂಪಡೆದು, ಪುನಶ್ಚೇತನಗೊಳಿಸಿ ಲಾಭದತ್ತ ಕೊಂಡೊಯ್ಯುವ ಚಿಂತನೆ ನಡೆದಿದೆ’ ಎಂದರು.