‘ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ಕಾಂಗ್ರೆಸ್ನ ಕಾರ್ಯಸೂಚಿಗಳು’ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಬಿಜೆಪಿ ಸರ್ಕಾರದಲ್ಲಿನ ಅಕ್ರಮ, ಭ್ರಷ್ಟಾಚಾರದ ಪ್ರಕರಣಗಳು ನಿತ್ಯವೂ ಹೊರಬರುತ್ತಿವೆ. ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂಬುದು ಭಾನುವಾರದ ಪತ್ರಿಕೆಯಲ್ಲಿ ಪ್ರಕಟವಾಗಿಲ್ಲವೆ’ ಎಂದು ‘ಪ್ರಜಾವಾಣಿ’ ವರದಿಯನ್ನು ಉಲ್ಲೇಖಿಸಿದರು.