ಮೂರೂ ಹಂತದ ಪಂಚಾಯತ್ ವ್ಯವಸ್ಥೆಯಡಿ ಕ್ಷೇತ್ರ ಪುನರ್ ವಿಂಗಡಣೆ ಮಾಡುವ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂದಕ್ಕೆ ಪಡೆದು ಆಯೋಗ ಸ್ಥಾಪಿಸುವ ಅವಕಾಶ ಕಲ್ಪಿಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಈ ತಿದ್ದುಪಡಿಗೆ ವಿಧಾನಮಂಡಲದ ಕಲಾಪದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿರೋಧದ ಮಧ್ಯೆಯೂ ಸರ್ಕಾರ, ಈ ಮಸೂದೆಗೆ ಅಂಗೀಕಾರ ಪಡೆದಿತ್ತು.