<p><strong>ವಿಜಯಪುರ:</strong> ಮುಖ್ಯಮಂತ್ರಿ ಬದಲಾವಣೆ ವಿಷಯ ಅಪ್ರಸ್ತುತ. ಬಸವರಾಜ ಬೊಮ್ಮಾಯಿ ಅವರು ಬಹಳ ದಕ್ಷವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.</p>.<p>ಮುಂದಿನ ಮುಖ್ಯಮಂತ್ರಿ ಮುರುಗೇಶ ನಿರಾಣಿ ಆಗಲಿದ್ದಾರೆ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಸುದ್ದಿಗೋಷ್ಠಿಯಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕೋವಿಡ್, ನೆರೆ, ಬೆಳೆಹಾನಿ ಸೇರಿದಂತೆ ಸಂಕಷ್ಟಗಳ ಸರಮಾಲೆಯೇ ಇವೆ. ಈ ಸಂದರ್ಭದಲ್ಲಿ ಜನರಿಗೆ ನೆರವಾಗಬೇಕಾಗಿರುವುದು ನಮಗೆ ಮುಖ್ಯವಾಗಬೇಕೇ ಹೊರತು, ಮುಖ್ಯಮಂತ್ರಿ ಬದಲಾವಣೆ ವಿಷಯವಲ್ಲ ಎಂದು ಈಶ್ವರಪ್ಪ ಅವರಿಗೆ ಕಿವಿ ಮಾತು ಹೇಳಿದರು.</p>.<p><strong>ಓದಿ:</strong><a href="https://www.prajavani.net/karnataka-news/murugesh-nirani-reaction-to-ks-eshwarappa-statement-on-karnataka-chief-minister-post-politics-news-888221.html" itemprop="url">ಬೊಮ್ಮಾಯಿ ಬದಲಾವಣೆ ಪ್ರಶ್ನೆಯೇ ಇಲ್ಲ: ಈಶ್ವರಪ್ಪ ಹೇಳಿಕೆಗೆ ನಿರಾಣಿ ಪ್ರತಿಕ್ರಿಯೆ </a></p>.<p>ನಾವು ಇರುವುದು ಕೇವಲ ಅಧಿಕಾರ, ಖುರ್ಚಿಗಾಗಿ ಅಲ್ಲ, ಜನರ ಸಂಕಷ್ಟಗಳಿಗೆ ಸ್ಪಂದಿಸುವವರು ಎಂಬ ಸಂದೇಶವನ್ನು ಈಶ್ವರಪ್ಪ ಅವರಿಗೆ ತಲುಪಿಸಿ ಎಂದು ಪತ್ರಕರ್ತರನ್ನು ಕೋರಿದರು.</p>.<p><strong>ಬೆಂಬಲ ಕೇಳಿದರೆ ತಪ್ಪಿಲ್ಲ:</strong></p>.<p>ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯು ಜೆಡಿಎಸ್ ಬೆಂಬಲ ಕೇಳಿರುವುದರಲ್ಲಿ ತಪ್ಪಿಲ್ಲ. ಜೆಡಿಎಸ್ನವರು ಕಾಂಗ್ರೆಸ್ ಅನ್ನು ಯಾವಾಗಲೂ ಇಷ್ಟಪಡುವುದಿಲ್ಲ. ಜೆಡಿಎಸ್ನವರು ಬಿಜೆಪಿಯನ್ನು ಹೆಚ್ಚು ಪ್ರೀತಿ ಮಾಡುತ್ತಾರೆ. ಹಲವು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಿಲ್ಲ. ಹೀಗಾಗಿ ಅಂತಹ ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿಸಲು ಕೋರಲಾಗಿದೆ. ಈ ಸಂಬಂಧ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದರು.</p>.<p><strong>ರಾಷ್ಟ್ರೀಯ ಯೋಜನೆಯಾಗಿ ಭದ್ರಾ:</strong></p>.<p>ಕೇಂದ್ರ ಸರ್ಕಾರವು ಶೀಘ್ರದಲ್ಲೇ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲಿದೆ ಎಂದು ಹೇಳಿದರು.</p>.<p><strong>ಓದಿ:</strong><a href="https://www.prajavani.net/karnataka-news/murugesh-nirani-will-become-karnataka-cm-soon-bjp-ks-eshwarappa-888105.html" itemprop="url" target="_blank">ಮುರುಗೇಶ ನಿರಾಣಿ ಸಿಎಂ ಆಗ್ತಾರೆ: ಈಶ್ವರಪ್ಪ ಭವಿಷ್ಯ </a></p>.<p>ಕೃಷ್ಣಾ ಮೇಲ್ದಂಡೆ ಯೋಜನೆ ನ್ಯಾಯಾಧಿಕರಣ ತೀರ್ಪಿನ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಸೋಮವಾರ ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ, ಮಹಾರಾಷ್ಟ್ರ ಪ್ರತಿಪಾದಿಸಿವೆ. ಡಿ.13ಕ್ಕೆ ವಿಚಾರಣೆ ಮುಂದಕ್ಕೆ ಹೋಗಿದೆ. ಶೀಘ್ರದಲ್ಲೇ ನಮ್ಮ ಪಾಲಿನ ನೀರು ನಮಗೆ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಮುಖ್ಯಮಂತ್ರಿ ಬದಲಾವಣೆ ವಿಷಯ ಅಪ್ರಸ್ತುತ. ಬಸವರಾಜ ಬೊಮ್ಮಾಯಿ ಅವರು ಬಹಳ ದಕ್ಷವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.</p>.<p>ಮುಂದಿನ ಮುಖ್ಯಮಂತ್ರಿ ಮುರುಗೇಶ ನಿರಾಣಿ ಆಗಲಿದ್ದಾರೆ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಸುದ್ದಿಗೋಷ್ಠಿಯಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕೋವಿಡ್, ನೆರೆ, ಬೆಳೆಹಾನಿ ಸೇರಿದಂತೆ ಸಂಕಷ್ಟಗಳ ಸರಮಾಲೆಯೇ ಇವೆ. ಈ ಸಂದರ್ಭದಲ್ಲಿ ಜನರಿಗೆ ನೆರವಾಗಬೇಕಾಗಿರುವುದು ನಮಗೆ ಮುಖ್ಯವಾಗಬೇಕೇ ಹೊರತು, ಮುಖ್ಯಮಂತ್ರಿ ಬದಲಾವಣೆ ವಿಷಯವಲ್ಲ ಎಂದು ಈಶ್ವರಪ್ಪ ಅವರಿಗೆ ಕಿವಿ ಮಾತು ಹೇಳಿದರು.</p>.<p><strong>ಓದಿ:</strong><a href="https://www.prajavani.net/karnataka-news/murugesh-nirani-reaction-to-ks-eshwarappa-statement-on-karnataka-chief-minister-post-politics-news-888221.html" itemprop="url">ಬೊಮ್ಮಾಯಿ ಬದಲಾವಣೆ ಪ್ರಶ್ನೆಯೇ ಇಲ್ಲ: ಈಶ್ವರಪ್ಪ ಹೇಳಿಕೆಗೆ ನಿರಾಣಿ ಪ್ರತಿಕ್ರಿಯೆ </a></p>.<p>ನಾವು ಇರುವುದು ಕೇವಲ ಅಧಿಕಾರ, ಖುರ್ಚಿಗಾಗಿ ಅಲ್ಲ, ಜನರ ಸಂಕಷ್ಟಗಳಿಗೆ ಸ್ಪಂದಿಸುವವರು ಎಂಬ ಸಂದೇಶವನ್ನು ಈಶ್ವರಪ್ಪ ಅವರಿಗೆ ತಲುಪಿಸಿ ಎಂದು ಪತ್ರಕರ್ತರನ್ನು ಕೋರಿದರು.</p>.<p><strong>ಬೆಂಬಲ ಕೇಳಿದರೆ ತಪ್ಪಿಲ್ಲ:</strong></p>.<p>ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯು ಜೆಡಿಎಸ್ ಬೆಂಬಲ ಕೇಳಿರುವುದರಲ್ಲಿ ತಪ್ಪಿಲ್ಲ. ಜೆಡಿಎಸ್ನವರು ಕಾಂಗ್ರೆಸ್ ಅನ್ನು ಯಾವಾಗಲೂ ಇಷ್ಟಪಡುವುದಿಲ್ಲ. ಜೆಡಿಎಸ್ನವರು ಬಿಜೆಪಿಯನ್ನು ಹೆಚ್ಚು ಪ್ರೀತಿ ಮಾಡುತ್ತಾರೆ. ಹಲವು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಿಲ್ಲ. ಹೀಗಾಗಿ ಅಂತಹ ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿಸಲು ಕೋರಲಾಗಿದೆ. ಈ ಸಂಬಂಧ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದರು.</p>.<p><strong>ರಾಷ್ಟ್ರೀಯ ಯೋಜನೆಯಾಗಿ ಭದ್ರಾ:</strong></p>.<p>ಕೇಂದ್ರ ಸರ್ಕಾರವು ಶೀಘ್ರದಲ್ಲೇ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲಿದೆ ಎಂದು ಹೇಳಿದರು.</p>.<p><strong>ಓದಿ:</strong><a href="https://www.prajavani.net/karnataka-news/murugesh-nirani-will-become-karnataka-cm-soon-bjp-ks-eshwarappa-888105.html" itemprop="url" target="_blank">ಮುರುಗೇಶ ನಿರಾಣಿ ಸಿಎಂ ಆಗ್ತಾರೆ: ಈಶ್ವರಪ್ಪ ಭವಿಷ್ಯ </a></p>.<p>ಕೃಷ್ಣಾ ಮೇಲ್ದಂಡೆ ಯೋಜನೆ ನ್ಯಾಯಾಧಿಕರಣ ತೀರ್ಪಿನ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಸೋಮವಾರ ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ, ಮಹಾರಾಷ್ಟ್ರ ಪ್ರತಿಪಾದಿಸಿವೆ. ಡಿ.13ಕ್ಕೆ ವಿಚಾರಣೆ ಮುಂದಕ್ಕೆ ಹೋಗಿದೆ. ಶೀಘ್ರದಲ್ಲೇ ನಮ್ಮ ಪಾಲಿನ ನೀರು ನಮಗೆ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>