ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಆನಂದ್ ಸಿದ್ದು ನ್ಯಾಮಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾಮಾನ್ಯ ವರ್ಗದವರಿಗೆ ಶೇ 50 ರಷ್ಟು ಸಹಾಯಧನ, ಪರಿಶಿಷ್ಠ ಜಾತಿ ಮತ್ತು ಪಂಗಡದವರಿಗೆ ಶೇ 90 ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಸಹಾಯಧನವನ್ನು ಗರಿಷ್ಠ ಮಿತಿ ₹1 ಲಕ್ಷದವರೆಗೆ ನೀಡಲಾಗುತ್ತಿದೆ. ಸಣ್ಣ ಟ್ರಾಕ್ಟರ್ಗಳಿಗೆ ಮಾತ್ರ (45 ಪಿಟಿಒ ಎಚ್.ಪಿ.ವರೆಗೆ) ಸಾಮಾನ್ಯ ರೈತರಿಗೆ ₹75 ಸಾವಿರ, ಪರಿಶಿಷ್ಠ ಜಾತಿ ಮತ್ತು ಪಂಗಡದ ರೈತರಿಗೆ ಶೇ 90 ರಷ್ಟು ಗರಿಷ್ಠ ಅಂದರೆ ₹3 ಲಕ್ಷ ಸಹಾಯ ಧನ ನೀಡಲಾಗುತ್ತಿದೆ ಎಂದು ಹೇಳಿದರು.