‘ಆರೋಪಿ ಅಧಿಕಾರಿಯು ಪ್ರಸ್ತುತ ಮಲ್ಲೇಶ್ವರದ ಪ್ರಾಂತ್ಯ ಸಹಕಾರ ಸೌಧದಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕರ ಹುದ್ದೆಯಲ್ಲಿದ್ದಾರೆ. ಪಾಂಡುರಂಗ ಗರಗ್ ಅಕ್ರಮ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಅದೇ ಹುದ್ದೆಯಲ್ಲಿ ಮುಂದುವರಿದರೆ ಪ್ರಭಾವ ಬಳಸಿ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ, ಸಾಕ್ಷ್ಯಾಧಾರ ನಾಶಮಾಡುವ ಅಥವಾ ತಿರುಚುವ ಸಾಧ್ಯತೆಗಳಿವೆ. ಆದ್ದರಿಂದ ಆರೋಪಿತ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿ, ಲೀನ್ ಬದಲಾವಣೆ ಮಾಡಿ, ಇಲಾಖಾ ವಿಚಾರಣೆ ನಡೆಸಬೇಕು’ ಎಂದು ಸಿಂಗ್ ಶಿಫಾರಸು ಮಾಡಿದ್ದರು.