ಈ ಬಗ್ಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ 27 ಲಕ್ಷ ಮಂದಿ ಕಟ್ಟಡ ನಿರ್ಮಾಣ ಕಾರ್ಮಿಕರಿದ್ದಾರೆ. ಅವರಿಗೆ ತ್ವರಿತವಾಗಿ ಕೋವಿಡ್ ಲಸಿಕೆ ನೀಡುವ ಉದ್ದೇಶದಿಂದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಲಸಿಕೆಯ ವೆಚ್ಚ ಭರಿಸಲು ನಿರ್ಧರಿಸಲಾಗಿತ್ತು. ಆದರೆ, ಉಚಿತವಾಗಿ ಪೂರೈಸುತ್ತಿರುವ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ. ಈ ಕಾರಣದಿಂದ ಕೋವಿಡ್ ಲಸಿಕೆಯ ವೆಚ್ಚ ಭರಿಸುವ ಆದೇಶವನ್ನು ರದ್ದು ಮಾಡಲಾಗಿದೆ’ ಎಂದರು.