<p><strong>ಬೆಂಗಳೂರು: </strong>‘ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಕಾರ್ಮಿಕ ಕಲ್ಯಾಣ ಮಂಡಳಿಯ ನಯಾಪೈಸೆ ಹಣವನ್ನೂ ಬಳಸಿಲ್ಲ. ಕೋವಿಡ್ ಲಸಿಕೆಗೆ ವೆಚ್ಚ ಪಾವತಿಸುವ ಸಂಬಂಧ ಹೊರಡಿಸಿದ್ದ ಆದೇಶವನ್ನೇ ಹಿಂಪಡೆಯಲಾಗಿದೆ’ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಂ ಹೆಬ್ಬಾರ್ ತಿಳಿಸಿದರು.</p>.<p>ವಿಧಾನ ಪರಿಷತ್ನಲ್ಲಿ ಗುರುವಾರ ಕಾಂಗ್ರೆಸ್ನ ಕೆ. ಪ್ರಕಾಶ್ ರಾಥೋಡ್ ಪರವಾಗಿ ಸಚಿವರಿಗೆ ಪ್ರಶ್ನೆ ಕೇಳಿದ ವಿಧಾನ ಪರಿಷತ್ ಮುಖ್ಯ ಸಚೇತಕ ಎಂ. ನಾರಾಯಣಸ್ವಾಮಿ, ‘ಲಸಿಕೆಗೆ ಕಾರ್ಮಿಕ ನಿಧಿಯ ₹ 700 ಕೋಟಿ?’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿಯನ್ನು ಪ್ರಸ್ತಾಪಿಸಿದರು.</p>.<p>ಈ ಬಗ್ಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ 27 ಲಕ್ಷ ಮಂದಿ ಕಟ್ಟಡ ನಿರ್ಮಾಣ ಕಾರ್ಮಿಕರಿದ್ದಾರೆ. ಅವರಿಗೆ ತ್ವರಿತವಾಗಿ ಕೋವಿಡ್ ಲಸಿಕೆ ನೀಡುವ ಉದ್ದೇಶದಿಂದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಲಸಿಕೆಯ ವೆಚ್ಚ ಭರಿಸಲು ನಿರ್ಧರಿಸಲಾಗಿತ್ತು. ಆದರೆ, ಉಚಿತವಾಗಿ ಪೂರೈಸುತ್ತಿರುವ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ. ಈ ಕಾರಣದಿಂದ ಕೋವಿಡ್ ಲಸಿಕೆಯ ವೆಚ್ಚ ಭರಿಸುವ ಆದೇಶವನ್ನು ರದ್ದು ಮಾಡಲಾಗಿದೆ’ ಎಂದರು.</p>.<p>ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ 16.48 ಲಕ್ಷ ಕಾರ್ಮಿಕರಿಗೆ ತಲಾ ₹ 5,000ದಂತೆ ₹ 824.21 ಕೋಟಿ ನೆರವು ನೀಡಲಾಗಿದೆ. ₹ 53.94 ಕೋಟಿ ವೆಚ್ಚದಲ್ಲಿ 7.15 ಲಕ್ಷ ಆಹಾರ ಕಿಟ್ಗಳನ್ನು ವಿತರಿಸಲಾಗಿದೆ. 89.87 ಲಕ್ಷ ಸಿದ್ಧಪಡಿಸಿದ ಆಹಾರ ಪೊಟ್ಟಣಗಳ ವಿತರಣೆಗೆ ₹ 26.71 ಕೋಟಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಎರಡನೆ ಅಲೆಯ ಸಂದರ್ಭದಲ್ಲಿ 18.20 ಲಕ್ಷ ಕಾರ್ಮಿಕರಿಗೆ ತಲಾ ₹ 2,000ದಂತೆ ₹ 546.21 ಕೋಟಿ ನೆರವು ನೀಡಲಾಗಿದೆ. ₹ 227.41 ಕೋಟಿ ವೆಚ್ಚದಲ್ಲಿ 23.42 ಲಕ್ಷ ಆಹಾರ ಕಿಟ್ಗಳನ್ನು ವಿತರಿಸಲಾಗಿದೆ. 21.07 ಲಕ್ಷ ರಕ್ಷಣೆ ಮತ್ತು ನೈರ್ಮಲ್ಯ ಕಿಟ್ ವಿತರಣೆಗೆ ₹ 118.69 ಕೋಟಿ ವೆಚ್ಚ ಮಾಡಲಾಗಿದೆ ಎಂದು ಹೆಬ್ಬಾರ್ ತಿಳಿಸಿದರು.</p>.<p><strong>₹ 91 ಕೋಟಿ ಸಹಾಯಧನ: </strong>ಸದಸ್ಯತ್ವ ನವೀಕರಿಸದ 3.54 ಲಕ್ಷ ಕಾರ್ಮಿಕರ ಪೈಕಿ 2.49 ಲಕ್ಷ ಮಂದಿಗೆ ಕಾರ್ಮಿಕ ಅದಾಲತ್ ಮೂಲಕ ₹ 91 ಕೋಟಿ ನೆರವು ನೀಡಲಾಗಿದೆ ಎಂದರು.</p>.<p>ಕಾರ್ಮಿಕ ಕಲ್ಯಾಣ ಸೆಸ್ ರೂಪದಲ್ಲಿ 2021ರ ಆಗಸ್ಟ್ 31ರ ಅಂತ್ಯಕ್ಕೆ ₹ 7,709.06 ಕೋಟಿಯಷ್ಟು ಮೊತ್ತ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಕಾರ್ಮಿಕ ಕಲ್ಯಾಣ ಮಂಡಳಿಯ ನಯಾಪೈಸೆ ಹಣವನ್ನೂ ಬಳಸಿಲ್ಲ. ಕೋವಿಡ್ ಲಸಿಕೆಗೆ ವೆಚ್ಚ ಪಾವತಿಸುವ ಸಂಬಂಧ ಹೊರಡಿಸಿದ್ದ ಆದೇಶವನ್ನೇ ಹಿಂಪಡೆಯಲಾಗಿದೆ’ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಂ ಹೆಬ್ಬಾರ್ ತಿಳಿಸಿದರು.</p>.<p>ವಿಧಾನ ಪರಿಷತ್ನಲ್ಲಿ ಗುರುವಾರ ಕಾಂಗ್ರೆಸ್ನ ಕೆ. ಪ್ರಕಾಶ್ ರಾಥೋಡ್ ಪರವಾಗಿ ಸಚಿವರಿಗೆ ಪ್ರಶ್ನೆ ಕೇಳಿದ ವಿಧಾನ ಪರಿಷತ್ ಮುಖ್ಯ ಸಚೇತಕ ಎಂ. ನಾರಾಯಣಸ್ವಾಮಿ, ‘ಲಸಿಕೆಗೆ ಕಾರ್ಮಿಕ ನಿಧಿಯ ₹ 700 ಕೋಟಿ?’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿಯನ್ನು ಪ್ರಸ್ತಾಪಿಸಿದರು.</p>.<p>ಈ ಬಗ್ಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ 27 ಲಕ್ಷ ಮಂದಿ ಕಟ್ಟಡ ನಿರ್ಮಾಣ ಕಾರ್ಮಿಕರಿದ್ದಾರೆ. ಅವರಿಗೆ ತ್ವರಿತವಾಗಿ ಕೋವಿಡ್ ಲಸಿಕೆ ನೀಡುವ ಉದ್ದೇಶದಿಂದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಲಸಿಕೆಯ ವೆಚ್ಚ ಭರಿಸಲು ನಿರ್ಧರಿಸಲಾಗಿತ್ತು. ಆದರೆ, ಉಚಿತವಾಗಿ ಪೂರೈಸುತ್ತಿರುವ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ. ಈ ಕಾರಣದಿಂದ ಕೋವಿಡ್ ಲಸಿಕೆಯ ವೆಚ್ಚ ಭರಿಸುವ ಆದೇಶವನ್ನು ರದ್ದು ಮಾಡಲಾಗಿದೆ’ ಎಂದರು.</p>.<p>ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ 16.48 ಲಕ್ಷ ಕಾರ್ಮಿಕರಿಗೆ ತಲಾ ₹ 5,000ದಂತೆ ₹ 824.21 ಕೋಟಿ ನೆರವು ನೀಡಲಾಗಿದೆ. ₹ 53.94 ಕೋಟಿ ವೆಚ್ಚದಲ್ಲಿ 7.15 ಲಕ್ಷ ಆಹಾರ ಕಿಟ್ಗಳನ್ನು ವಿತರಿಸಲಾಗಿದೆ. 89.87 ಲಕ್ಷ ಸಿದ್ಧಪಡಿಸಿದ ಆಹಾರ ಪೊಟ್ಟಣಗಳ ವಿತರಣೆಗೆ ₹ 26.71 ಕೋಟಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಎರಡನೆ ಅಲೆಯ ಸಂದರ್ಭದಲ್ಲಿ 18.20 ಲಕ್ಷ ಕಾರ್ಮಿಕರಿಗೆ ತಲಾ ₹ 2,000ದಂತೆ ₹ 546.21 ಕೋಟಿ ನೆರವು ನೀಡಲಾಗಿದೆ. ₹ 227.41 ಕೋಟಿ ವೆಚ್ಚದಲ್ಲಿ 23.42 ಲಕ್ಷ ಆಹಾರ ಕಿಟ್ಗಳನ್ನು ವಿತರಿಸಲಾಗಿದೆ. 21.07 ಲಕ್ಷ ರಕ್ಷಣೆ ಮತ್ತು ನೈರ್ಮಲ್ಯ ಕಿಟ್ ವಿತರಣೆಗೆ ₹ 118.69 ಕೋಟಿ ವೆಚ್ಚ ಮಾಡಲಾಗಿದೆ ಎಂದು ಹೆಬ್ಬಾರ್ ತಿಳಿಸಿದರು.</p>.<p><strong>₹ 91 ಕೋಟಿ ಸಹಾಯಧನ: </strong>ಸದಸ್ಯತ್ವ ನವೀಕರಿಸದ 3.54 ಲಕ್ಷ ಕಾರ್ಮಿಕರ ಪೈಕಿ 2.49 ಲಕ್ಷ ಮಂದಿಗೆ ಕಾರ್ಮಿಕ ಅದಾಲತ್ ಮೂಲಕ ₹ 91 ಕೋಟಿ ನೆರವು ನೀಡಲಾಗಿದೆ ಎಂದರು.</p>.<p>ಕಾರ್ಮಿಕ ಕಲ್ಯಾಣ ಸೆಸ್ ರೂಪದಲ್ಲಿ 2021ರ ಆಗಸ್ಟ್ 31ರ ಅಂತ್ಯಕ್ಕೆ ₹ 7,709.06 ಕೋಟಿಯಷ್ಟು ಮೊತ್ತ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>