ಪ್ರತಿಭಟನೆ ಸ್ಥಳದಲ್ಲಿ ಗುರುವಾರ ಹಾಜರಿದ್ದ ಸಿದ್ದಯ್ಯ ಹಿರೇಮಠ ಹಾಗೂ ವೆಂಕಟರಾಜು, ‘ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿ ವಿಷ ಕುಡಿದಿದ್ದರು. ಅವರಿಬ್ಬರನ್ನೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಸಿದ್ದಯ್ಯ ಮೃತಪಟ್ಟಿದ್ದು, ವೆಂಕಟರಾಜು ಆರೋಗ್ಯ ಸ್ಥಿತಿಯೂ ಗಂಭೀರವಾಗಿದೆ.