ಬೆಂಗಳೂರು: ‘ಸರ್ಕಾರಿ ಆಸ್ತಿಯನ್ನು ಸಾರ್ವಜನಿಕ ಹರಾಜು ಅಥವಾ ಟೆಂಡರ್ ಪ್ರಕ್ರಿಯೆ ಮೂಲಕವೇ ಗುತ್ತಿಗೆ ನೀಡಬೇಕು. ಇಲ್ಲವಾದರೆ ಅಧಿಕಾರವನ್ನು ನಿರಂಕುಶವಾಗಿ ಬಳಕೆ ಮಾಡಿದಂತಾಗುತ್ತದೆ. ಆದ್ದರಿಂದ, ಸಾರ್ವಜನಿಕ ಆಸ್ತಿ ಹಂಚಿಕೆಯಲ್ಲಿ ಸರ್ಕಾರ ಪಾರದರ್ಶಕತೆ ಕಾಯ್ದುಕೊಳ್ಳಬೇಕು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.