<p><strong>ಬೆಂಗಳೂರು: </strong>ಸ್ಥಳೀಯರು ಅಥವಾ ಶೃಂಗೇರಿ ಮಠದ ಧರ್ಮದರ್ಶಿಗಳಿಂದ ಕೋರಿಕೆ ಬಂದರೆ ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ನಡೆಯುತ್ತಿರುವ ಟಿಪ್ಪು ಸುಲ್ತಾನ್ ಸಲಾಂ ಆರತಿ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಶೃಂಗೇರಿಯಲ್ಲಿ ಸಲಾಂ ಆರತಿ ನಿಲ್ಲಿಸುವಂತೆ ಈವರೆಗೆ ಯಾವುದೇ ಮನವಿ ಬಂದಿಲ್ಲ. ಅಂತಹ ಬೇಡಿಕೆ ಬಂದರೆ ಸಲಾಂ ಆರತಿ ನಿಲ್ಲಿಸುತ್ತೇವೆ’ ಎಂದರು.</p>.<p>‘ಟಿಪ್ಪು ಸುಲ್ತಾನ್ ಕನ್ನಡಿಗನಲ್ಲ. ಆತನ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಪರ್ಷಿಯನ್ ಭಾಷೆ ಬಳಸುತ್ತಿದ್ದರು. ಆತ ಒಬ್ಬ ಮತಾಂಧನಾಗಿದ್ದ. ಮೈಸೂರು ಮಹಾರಾಜರು ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ಕಾರಣದಿಂದ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಬದಲಿಸಿ ಒಡೆಯರ್ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಲಾಗಿದೆ’ ಎಂದು ಹೇಳಿದರು.</p>.<p>ಸಿದ್ದರಾಮಯ್ಯ ಅವರು ಬೇಕಿದ್ದರೆ ಜಿನ್ನಾ, ಘಜ್ನಿ, ಲಾಡೆನ್ ಹೆಸರಿನಲ್ಲಿ ರೈಲು ಓಡಿಸಲಿ. ಆಗ ಜನ ಯಾರನ್ನು ಓಡಿಸುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದರು.</p>.<p><strong>ಓದಿ...<a href="https://www.prajavani.net/karnataka-news/seminar-on-nadaprabhu-kempegowda-and-vokkaliga-community-978432.html" target="_blank">ಒಕ್ಕಲಿಗರು ಕುರಿಗಳಲ್ಲ, ನಾಡನ್ನಾಳಿದ ಸಿಂಹಗಳು: ನಿರ್ಮಲಾನಂದನಾಥ ಸ್ವಾಮೀಜಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸ್ಥಳೀಯರು ಅಥವಾ ಶೃಂಗೇರಿ ಮಠದ ಧರ್ಮದರ್ಶಿಗಳಿಂದ ಕೋರಿಕೆ ಬಂದರೆ ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ನಡೆಯುತ್ತಿರುವ ಟಿಪ್ಪು ಸುಲ್ತಾನ್ ಸಲಾಂ ಆರತಿ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಶೃಂಗೇರಿಯಲ್ಲಿ ಸಲಾಂ ಆರತಿ ನಿಲ್ಲಿಸುವಂತೆ ಈವರೆಗೆ ಯಾವುದೇ ಮನವಿ ಬಂದಿಲ್ಲ. ಅಂತಹ ಬೇಡಿಕೆ ಬಂದರೆ ಸಲಾಂ ಆರತಿ ನಿಲ್ಲಿಸುತ್ತೇವೆ’ ಎಂದರು.</p>.<p>‘ಟಿಪ್ಪು ಸುಲ್ತಾನ್ ಕನ್ನಡಿಗನಲ್ಲ. ಆತನ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಪರ್ಷಿಯನ್ ಭಾಷೆ ಬಳಸುತ್ತಿದ್ದರು. ಆತ ಒಬ್ಬ ಮತಾಂಧನಾಗಿದ್ದ. ಮೈಸೂರು ಮಹಾರಾಜರು ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ಕಾರಣದಿಂದ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಬದಲಿಸಿ ಒಡೆಯರ್ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಲಾಗಿದೆ’ ಎಂದು ಹೇಳಿದರು.</p>.<p>ಸಿದ್ದರಾಮಯ್ಯ ಅವರು ಬೇಕಿದ್ದರೆ ಜಿನ್ನಾ, ಘಜ್ನಿ, ಲಾಡೆನ್ ಹೆಸರಿನಲ್ಲಿ ರೈಲು ಓಡಿಸಲಿ. ಆಗ ಜನ ಯಾರನ್ನು ಓಡಿಸುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದರು.</p>.<p><strong>ಓದಿ...<a href="https://www.prajavani.net/karnataka-news/seminar-on-nadaprabhu-kempegowda-and-vokkaliga-community-978432.html" target="_blank">ಒಕ್ಕಲಿಗರು ಕುರಿಗಳಲ್ಲ, ನಾಡನ್ನಾಳಿದ ಸಿಂಹಗಳು: ನಿರ್ಮಲಾನಂದನಾಥ ಸ್ವಾಮೀಜಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>