ವಿಧಾನ ಪರಿಷತ್ನಲ್ಲಿ ಬುಧವಾರ ‘ಕರ್ನಾಟಕ ಸ್ಟಾಂಪು (ತಿದ್ದುಪಡಿ) ಮಸೂದೆ–2021’ರ ಪರ್ಯಾಲೋಚನೆ ಸಂದರ್ಭದಲ್ಲಿ ಮಾತನಾಡಿದ ಅವರು, ‘ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಆಸ್ತಿಗಳ ಮಾರ್ಗಸೂಚಿ ದರದಲ್ಲಿ ಸ್ವಲ್ಪ ಹೆಚ್ಚಳ ಮಾಡುವುದು ಹಾಗೂ ಉಳಿದ ಪ್ರದೇಶಗಳಲ್ಲಿ ತುಸು ಇಳಿಕೆ ಮಾಡುವ ಪ್ರಸ್ತಾವವಿದೆ. ಕೋವಿಡ್ನಿಂದ ನೋಂದಣಿ ವಹಿವಾಟು ಕುಸಿದಿದೆ. ಸ್ಥಿರಾಸ್ತಿ ಮಾರಾಟ ಮತ್ತು ಖರೀದಿಯನ್ನು ಉತ್ತೇಜಿಸುವ ಉದ್ದೇಶದಿಂದ ಮಾರ್ಗಸೂಚಿ ದರ ಪರಿಷ್ಕರಣೆ ಅಗತ್ಯವಿದೆ’ ಎಂದರು.