<p><strong>ಬೆಂಗಳೂರು</strong>: ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವುದರಿಂದ ಚಿತ್ರಮಂದಿರಗಳ ಮೇಲಿನ ನಿರ್ಬಂಧ ತೆರವುಗೊಳಿಸಿ, ಶೇಕಡ 100ರಷ್ಟು ಆಸನಗಳ ಭರ್ತಿಗೆ ಅವಕಾಶ ಕಲ್ಪಿಸುವ ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.</p>.<p>ಚಿತ್ರರಂಗದ ಪ್ರಮುಖರು ಮಂಗಳವಾರ ವಿಧಾನಸೌಧದಲ್ಲಿ ಸಚಿವರನ್ನು ಭೇಟಿಮಾಡಿ, ಚಿತ್ರಮಂದಿರಗಳ ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ಒತ್ತಾಯಿಸಿದರು. ಶೇ 50ರಷ್ಟು ಆಸನಗಳ ಬದಲಿಗೆ ಎಲ್ಲ ಆಸನಗಳನ್ನೂ ಭರ್ತಿ ಮಾಡಲು ಅವಕಾಶ ನೀಡುವಂತೆ ಆಗ್ರಹಿಸಿದರು.</p>.<p>‘ಕೋವಿಡ್ನಿಂದಾಗಿ ಚಿತ್ರೋದ್ಯಮ ಹೆಚ್ಚು ನಷ್ಟ ಅನುಭವಿಸಿದೆ. ಚಿತ್ರರಂಗಕ್ಕೆ ಪೂರ್ಣ ಬೆಂಬಲ ನೀಡಲು ಸರ್ಕಾರ ಸಿದ್ಧವಾಗಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಎರಡರಿಂದ ಮೂರು ದಿನಗಳಲ್ಲಿ ಸಭೆ ಸೇರಲಿದೆ. ಸಮಿತಿಯ ಸಲಹೆ ಆಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಸಚಿವರು ಹೇಳಿದರು.</p>.<p>ಈಗ ಪತ್ತೆಯಾಗುತ್ತಿರುವ ಕೋವಿಡ್ ಹೊಸ ಪ್ರಕರಣಗಳು, ಇತರ ರಾಜ್ಯಗಳು ಕೈಗೊಂಡಿರುವ ನಿರ್ಧಾರಗಳು ಮತ್ತು ಸಂಭವನೀಯ ಪರಿಸ್ಥಿತಿ ಕುರಿತ ಮುನ್ನೆಚ್ಚರಿಕೆಗಳನ್ನು ಆಧರಿಸಿ ನಿರ್ಧಾರಕ್ಕೆ ಬರಲಾಗುವುದು ಎಂದರು.</p>.<p>‘ಈಗ ರಾಜ್ಯದಲ್ಲಿ ನಿತ್ಯವೂ 600ರಿಂದ 800 ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಕೋವಿಡ್ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 1ಕ್ಕಿಂತ ಕಡಿಮೆ ಇದೆ. ಸಾವಿನ ಸಂಖ್ಯೆಯೂ ಗಣನೀಯವಾಗಿ ಕಡಿಮೆಯಾಗಿದೆ. ಸದ್ಯ, ಚಿತ್ರಮಂದಿರಗಳಲ್ಲಿ ಪೂರ್ಣ ಆಸನ ಭರ್ತಿಗೆ ಅವಕಾಶ ನೀಡಲು ಪೂರಕವಾದ ಸನ್ನಿವೇಶವಿದೆ’ ಎಂದು ಹೇಳಿದರು.</p>.<p>ಸರ್ಕಾರ ಅತ್ಯಂತ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಲಿದೆ. ಯಾವುದೇ ಒಂದು ತೀರ್ಮಾನವೂ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಲು ಕಾರಣವಾಗಬಾರದು ಎಂಬುದು ಸರ್ಕಾರದ ಕಾಳಜಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವುದರಿಂದ ಚಿತ್ರಮಂದಿರಗಳ ಮೇಲಿನ ನಿರ್ಬಂಧ ತೆರವುಗೊಳಿಸಿ, ಶೇಕಡ 100ರಷ್ಟು ಆಸನಗಳ ಭರ್ತಿಗೆ ಅವಕಾಶ ಕಲ್ಪಿಸುವ ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.</p>.<p>ಚಿತ್ರರಂಗದ ಪ್ರಮುಖರು ಮಂಗಳವಾರ ವಿಧಾನಸೌಧದಲ್ಲಿ ಸಚಿವರನ್ನು ಭೇಟಿಮಾಡಿ, ಚಿತ್ರಮಂದಿರಗಳ ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ಒತ್ತಾಯಿಸಿದರು. ಶೇ 50ರಷ್ಟು ಆಸನಗಳ ಬದಲಿಗೆ ಎಲ್ಲ ಆಸನಗಳನ್ನೂ ಭರ್ತಿ ಮಾಡಲು ಅವಕಾಶ ನೀಡುವಂತೆ ಆಗ್ರಹಿಸಿದರು.</p>.<p>‘ಕೋವಿಡ್ನಿಂದಾಗಿ ಚಿತ್ರೋದ್ಯಮ ಹೆಚ್ಚು ನಷ್ಟ ಅನುಭವಿಸಿದೆ. ಚಿತ್ರರಂಗಕ್ಕೆ ಪೂರ್ಣ ಬೆಂಬಲ ನೀಡಲು ಸರ್ಕಾರ ಸಿದ್ಧವಾಗಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಎರಡರಿಂದ ಮೂರು ದಿನಗಳಲ್ಲಿ ಸಭೆ ಸೇರಲಿದೆ. ಸಮಿತಿಯ ಸಲಹೆ ಆಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಸಚಿವರು ಹೇಳಿದರು.</p>.<p>ಈಗ ಪತ್ತೆಯಾಗುತ್ತಿರುವ ಕೋವಿಡ್ ಹೊಸ ಪ್ರಕರಣಗಳು, ಇತರ ರಾಜ್ಯಗಳು ಕೈಗೊಂಡಿರುವ ನಿರ್ಧಾರಗಳು ಮತ್ತು ಸಂಭವನೀಯ ಪರಿಸ್ಥಿತಿ ಕುರಿತ ಮುನ್ನೆಚ್ಚರಿಕೆಗಳನ್ನು ಆಧರಿಸಿ ನಿರ್ಧಾರಕ್ಕೆ ಬರಲಾಗುವುದು ಎಂದರು.</p>.<p>‘ಈಗ ರಾಜ್ಯದಲ್ಲಿ ನಿತ್ಯವೂ 600ರಿಂದ 800 ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಕೋವಿಡ್ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 1ಕ್ಕಿಂತ ಕಡಿಮೆ ಇದೆ. ಸಾವಿನ ಸಂಖ್ಯೆಯೂ ಗಣನೀಯವಾಗಿ ಕಡಿಮೆಯಾಗಿದೆ. ಸದ್ಯ, ಚಿತ್ರಮಂದಿರಗಳಲ್ಲಿ ಪೂರ್ಣ ಆಸನ ಭರ್ತಿಗೆ ಅವಕಾಶ ನೀಡಲು ಪೂರಕವಾದ ಸನ್ನಿವೇಶವಿದೆ’ ಎಂದು ಹೇಳಿದರು.</p>.<p>ಸರ್ಕಾರ ಅತ್ಯಂತ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಲಿದೆ. ಯಾವುದೇ ಒಂದು ತೀರ್ಮಾನವೂ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಲು ಕಾರಣವಾಗಬಾರದು ಎಂಬುದು ಸರ್ಕಾರದ ಕಾಳಜಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>