‘ಉದ್ಯೋಗ ಮಾರ್ಗದರ್ಶನ, ವ್ಯಕ್ತಿತ್ವ ವಿಕಸನ ಹಾಗೂ ಕೌಶಲ ತರಬೇತಿ ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ, ರಚನಾತ್ಮಕ ಉದ್ಯೋಗ ನೀತಿ ಬೇಕು. ಇತರ ರಾಜ್ಯಗಳಲ್ಲಿ ಕೈಗಾರಿಕಾ ನೀತಿಯಷ್ಟೆ ಇದೆ. ದೇಶದಲ್ಲೇ ಮೊದಲ ಬಾರಿಗೆ ಉದ್ಯೋಗ ನೀತಿ ತರಲಿದ್ದೇವೆ. ಇದುವರೆಗೂ ಉದ್ಯೋಗದಾತರಿಗೆ ಸಾಮಾನ್ಯ ಸೂತ್ರದಡಿ ಪ್ರೋತ್ಸಾಹ ಹಾಗೂ ಉತ್ತೇಜನ ಕೊಡಲಾಗುತ್ತಿತ್ತು. ಇನ್ಮುಂದೆ, ಹೆಚ್ಚು ಉದ್ಯೋಗ ಕೊಟ್ಟವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು’ ಎಂದು ಪ್ರಕಟಿಸಿದರು.