ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ನ ಆರ್.ವಿ. ದೇಶಪಾಂಡೆ, ‘ಸಂಪೂರ್ಣವಾಗಿ ಬುಡಕಟ್ಟು ಸಮುದಾಯದ ಗುಣ ಲಕ್ಷಣಗಳನ್ನು ಹೊಂದಿರುವ ಕುಣಬಿ, ಹಾಲಕ್ಕಿ ಒಕ್ಕಲಿಗ ಮತ್ತು ಗೌಳಿ ಸಮುದಾಯಗಳನ್ನು ಎಸ್.ಟಿ ಪಟ್ಟಿಗೆ ಸೇರಿಸಬೇಕು. ಗೋವಾ ರಾಜ್ಯದಲ್ಲಿ ಈ ಸಮುದಾಯಗಳು ಎಸ್.ಟಿ ಪಟ್ಟಿಯಲ್ಲಿವೆ. ರಾಜ್ಯದಲ್ಲೂ ಅದೇ ರೀತಿ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.