ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ. ಸದಸ್ಯರ ಹರಾಜು ಪ್ರಕರಣದ ಆರೋಪಿಗಳು ಅವಿರೋಧ ಆಯ್ಕೆ

Last Updated 16 ಡಿಸೆಂಬರ್ 2020, 18:51 IST
ಅಕ್ಷರ ಗಾತ್ರ

ಕುರುಗೋಡು (ಬಳ್ಳಾರಿ): ತಾಲ್ಲೂಕಿನ ಸಿಂಧಿಗೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೈಲೂರು ಗ್ರಾಮ ಪಂಚಾಯ್ತಿ ಸದಸ್ಯರ ಹರಾಜು ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ 7 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದೇವಸ್ಥಾನದ ಅಭಿವೃದ್ಧಿಗೆ ಅವಿರೋಧ ಆಯ್ಕೆಮಾಡುವ ಪ್ರಕ್ರಿಯೆಯಲ್ಲಿ ₹51.20 ಲಕ್ಷ ಸಂಗ್ರಹವಾದ ವಿಡಿಯೊ ಕಳೆದ ವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸುದ್ದಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 18 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಪ್ರಕರಣದಲ್ಲಿರುವವರೇ ಅವಿರೋಧ ಆಯ್ಕೆಯಾಗಿರುವುದು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಗುರುಬಸವರಾಜ, ‘ಸದಸ್ಯರ ಅವಿರೋಧ ಆಯ್ಕೆಯ ಹರಾಜು ಪ್ರಕರಣದಲ್ಲಿರುವ ಏಳು ಜನರು ಬೈಲೂರು ಗ್ರಾಮದಿಂದ ಅವಿರೋಧ ಆಯ್ಕೆಯಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ತಾತ್ಕಾಲಿಕವಾಗಿ ಅವಿರೋಧ ಆಯ್ಕೆ ಘೋಷಣೆ ಮಾಡದಂತೆ ತಡೆಹಿಡಿಯಲು ಸೂಚಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT