ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಮಾತನಾಡಿ, ‘ಹಲವು ವರ್ಷಗಳಿಂದ ನಮ್ಮಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಇಂದಿನ ಜಾಗತಿಕ ಸ್ಥಿತಿಗತಿಗೆ ಅಗತ್ಯವಿರುವ ಸಮಗ್ರ ಶಿಕ್ಷಣದ ಜೊತೆಗೆ ಸಾಮಾಜಿಕಸೇವೆ, ಪರಿಸರ ಕಾಳಜಿ, ಕಲೆ-ಸಂಸ್ಕೃತಿ ಹಾಗೂ ರಾಷ್ಟ್ರಪ್ರೇಮದಂತಹ ಉನ್ನತ ಮೌಲ್ಯಗಳನ್ನೂ ಕಲಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.