ಈ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ) ಕಾರ್ಯದರ್ಶಿ ವಿ. ಪೊನ್ನುರಾಜ್, ‘ಗ್ರಾಮ ಒನ್ ಕೇಂದ್ರಗಳ ಮೂಲಕ ನಾಗರಿಕರ ಮನೆ ಬಾಗಿಲಿಗೆ ವಿವಿಧ ಸೇವೆಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶ. ಸೇವಾಸಿಂಧು ಯೋಜನೆಯಡಿ ರೂಪಿಸಲಾಗಿರುವ 800 ಸೇವೆಗಳ ಜೊತೆ ಆಧಾರ್, ಪಾನ್ ಕಾರ್ಡ್, ಬ್ಯಾಂಕಿಂಗ್, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಇ- ಸ್ಟ್ಯಾಂಪ್ ಮತ್ತಿತರ ಸೇವೆಗಳನ್ನೂ ನೀಡಲಾಗುತ್ತಿದೆ’ ಎಂದಿದ್ದಾರೆ.