‘ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರವೂ ಬಿಜೆಪಿಯಿಂದ ಗ್ರಾಮ ಸ್ವರಾಜ್ ಸಮಾವೇಶ, ಕಾಂಗ್ರೆಸ್ನಿಂದ ಪ್ರಜಾ ಪ್ರತಿನಿಧಿ ಸಮಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರತಿ ಪಂಚಾಯಿತಿಗೆ ವರ್ಷಕ್ಕೆ ₹1.5 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು, ನರೇಗಾ ಯೋಜನೆ ಅನುಷ್ಠಾನದ ಹೊಣೆ ಜಿಲ್ಲಾ ಪಂಚಾಯಿತಿ ಬದಲು ಗ್ರಾಮ ಪಂಚಾಯಿತಿಗೆ ವಹಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ಬಳಿಕ ಈ ರೀತಿ ಘೋಷಣೆ ಮಾಡಿರುವುದು ಚುನಾವಣೆ ಮೇಲೆ ಪ್ರಭಾವ ಬೀರಲಿದೆ’ ಎಂದು ಹೇಳಿದೆ.