<p><strong>ಬೆಂಗಳೂರು:</strong> ‘ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು ಪ್ರಭಾವ ಬೀರುತ್ತಿವೆ ಮತ್ತು ನೀತಿ ಸಂಹಿತೆ ಉಲ್ಲಂಘಿಸುತ್ತಿವೆ’ ಎಂದು ಆರೋಪಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಂಘಟನೆ ದೂರು ಸಲ್ಲಿಸಿದೆ.</p>.<p>‘ಗ್ರಾಮ ಪಂಚಾಯತಿ ಚುನಾವಣೆಗಳು ಯಾವುದೇ ಪಕ್ಷದ ಆಧಾರದಲ್ಲಿ ನಡೆಯುತ್ತಿಲ್ಲ. ಆದರೆ, ಕೆಲ ಪಕ್ಷಗಳು ಈ ಚುನಾವಣೆಯಲ್ಲಿ ನೇರವಾಗಿ ಪಾಲ್ಗೊಂಡು ಪಕ್ಷ ಸಂಘಟನೆ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿವೆ. ಸಾರ್ವಜನಿಕ ಸಮಾವೇಶಗಳು, ಅಭ್ಯರ್ಥಿಗಳಿಗೆ ಬೆಂಬಲ ನೀಡುತ್ತಿವೆ’ ಎಂದು ಆರೋಪಿಸಿದೆ.</p>.<p>‘ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರವೂ ಬಿಜೆಪಿಯಿಂದ ಗ್ರಾಮ ಸ್ವರಾಜ್ ಸಮಾವೇಶ, ಕಾಂಗ್ರೆಸ್ನಿಂದ ಪ್ರಜಾ ಪ್ರತಿನಿಧಿ ಸಮಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರತಿ ಪಂಚಾಯಿತಿಗೆ ವರ್ಷಕ್ಕೆ ₹1.5 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು, ನರೇಗಾ ಯೋಜನೆ ಅನುಷ್ಠಾನದ ಹೊಣೆ ಜಿಲ್ಲಾ ಪಂಚಾಯಿತಿ ಬದಲು ಗ್ರಾಮ ಪಂಚಾಯಿತಿಗೆ ವಹಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ಬಳಿಕ ಈ ರೀತಿ ಘೋಷಣೆ ಮಾಡಿರುವುದು ಚುನಾವಣೆ ಮೇಲೆ ಪ್ರಭಾವ ಬೀರಲಿದೆ’ ಎಂದು ಹೇಳಿದೆ.</p>.<p>‘ಇವುಗಳ ಬಗ್ಗೆ ಆಯೋಗ ಗಮನ ಹರಿಸಿ ನೈಜ ಗ್ರಾಮ ಸ್ವರಾಜ್ ಸ್ಥಾಪನೆಯ ಸಂವಿಧಾನದ ಆಶಯ ಕಾಪಾಡಬೇಕು’ ಎಂದು ಆಂದೋಲನದ ಸಂಚಾಲಕಿ ನಂದನ ರೆಡ್ಡಿ ಆಯೋಗಕ್ಕೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು ಪ್ರಭಾವ ಬೀರುತ್ತಿವೆ ಮತ್ತು ನೀತಿ ಸಂಹಿತೆ ಉಲ್ಲಂಘಿಸುತ್ತಿವೆ’ ಎಂದು ಆರೋಪಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಂಘಟನೆ ದೂರು ಸಲ್ಲಿಸಿದೆ.</p>.<p>‘ಗ್ರಾಮ ಪಂಚಾಯತಿ ಚುನಾವಣೆಗಳು ಯಾವುದೇ ಪಕ್ಷದ ಆಧಾರದಲ್ಲಿ ನಡೆಯುತ್ತಿಲ್ಲ. ಆದರೆ, ಕೆಲ ಪಕ್ಷಗಳು ಈ ಚುನಾವಣೆಯಲ್ಲಿ ನೇರವಾಗಿ ಪಾಲ್ಗೊಂಡು ಪಕ್ಷ ಸಂಘಟನೆ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿವೆ. ಸಾರ್ವಜನಿಕ ಸಮಾವೇಶಗಳು, ಅಭ್ಯರ್ಥಿಗಳಿಗೆ ಬೆಂಬಲ ನೀಡುತ್ತಿವೆ’ ಎಂದು ಆರೋಪಿಸಿದೆ.</p>.<p>‘ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರವೂ ಬಿಜೆಪಿಯಿಂದ ಗ್ರಾಮ ಸ್ವರಾಜ್ ಸಮಾವೇಶ, ಕಾಂಗ್ರೆಸ್ನಿಂದ ಪ್ರಜಾ ಪ್ರತಿನಿಧಿ ಸಮಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರತಿ ಪಂಚಾಯಿತಿಗೆ ವರ್ಷಕ್ಕೆ ₹1.5 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು, ನರೇಗಾ ಯೋಜನೆ ಅನುಷ್ಠಾನದ ಹೊಣೆ ಜಿಲ್ಲಾ ಪಂಚಾಯಿತಿ ಬದಲು ಗ್ರಾಮ ಪಂಚಾಯಿತಿಗೆ ವಹಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ಬಳಿಕ ಈ ರೀತಿ ಘೋಷಣೆ ಮಾಡಿರುವುದು ಚುನಾವಣೆ ಮೇಲೆ ಪ್ರಭಾವ ಬೀರಲಿದೆ’ ಎಂದು ಹೇಳಿದೆ.</p>.<p>‘ಇವುಗಳ ಬಗ್ಗೆ ಆಯೋಗ ಗಮನ ಹರಿಸಿ ನೈಜ ಗ್ರಾಮ ಸ್ವರಾಜ್ ಸ್ಥಾಪನೆಯ ಸಂವಿಧಾನದ ಆಶಯ ಕಾಪಾಡಬೇಕು’ ಎಂದು ಆಂದೋಲನದ ಸಂಚಾಲಕಿ ನಂದನ ರೆಡ್ಡಿ ಆಯೋಗಕ್ಕೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>