ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು

Last Updated 5 ಡಿಸೆಂಬರ್ 2020, 16:54 IST
ಅಕ್ಷರ ಗಾತ್ರ

ಬೆಂಗಳೂರು: ‘ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು ಪ್ರಭಾವ ಬೀರುತ್ತಿವೆ ಮತ್ತು ನೀತಿ ಸಂಹಿತೆ ಉಲ್ಲಂಘಿಸುತ್ತಿವೆ’ ಎಂದು ಆರೋಪಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಂಘಟನೆ ದೂರು ಸಲ್ಲಿಸಿದೆ.

‘ಗ್ರಾಮ ಪಂಚಾಯತಿ ಚುನಾವಣೆಗಳು ಯಾವುದೇ ಪಕ್ಷದ ಆಧಾರದಲ್ಲಿ ನಡೆಯುತ್ತಿಲ್ಲ. ಆದರೆ, ಕೆಲ ಪಕ್ಷಗಳು ಈ ಚುನಾವಣೆಯಲ್ಲಿ ನೇರವಾಗಿ ಪಾಲ್ಗೊಂಡು ಪಕ್ಷ ಸಂಘಟನೆ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿವೆ. ಸಾರ್ವಜನಿಕ ಸಮಾವೇಶಗಳು, ಅಭ್ಯರ್ಥಿಗಳಿಗೆ ಬೆಂಬಲ ನೀಡುತ್ತಿವೆ’ ಎಂದು ಆರೋ‍ಪಿಸಿದೆ.

‘ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರವೂ ಬಿಜೆಪಿಯಿಂದ ಗ್ರಾಮ ಸ್ವರಾಜ್ ಸಮಾವೇಶ, ಕಾಂಗ್ರೆಸ್‌ನಿಂದ ಪ್ರಜಾ ಪ್ರತಿನಿಧಿ ಸಮಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರತಿ ಪಂಚಾಯಿತಿಗೆ ವರ್ಷಕ್ಕೆ ₹1.5 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು, ನರೇಗಾ ಯೋಜನೆ ಅನುಷ್ಠಾನದ ಹೊಣೆ ಜಿಲ್ಲಾ ಪಂಚಾಯಿತಿ ಬದಲು ಗ್ರಾಮ ಪಂಚಾಯಿತಿಗೆ ವಹಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ಬಳಿಕ ಈ ರೀತಿ ಘೋಷಣೆ ಮಾಡಿರುವುದು ಚುನಾವಣೆ ಮೇಲೆ ಪ್ರಭಾವ ಬೀರಲಿದೆ’ ಎಂದು ಹೇಳಿದೆ.

‘ಇವುಗಳ ಬಗ್ಗೆ ಆಯೋಗ ಗಮನ ಹರಿಸಿ ನೈಜ ಗ್ರಾಮ ಸ್ವರಾಜ್ ಸ್ಥಾಪನೆಯ ಸಂವಿಧಾನದ ಆಶಯ ಕಾಪಾಡಬೇಕು’ ಎಂದು ಆಂದೋಲನದ ಸಂಚಾಲಕಿ ನಂದನ ರೆಡ್ಡಿ ಆಯೋಗಕ್ಕೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT