ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ವಿರುದ್ಧ ಗ್ರಾಮಗಳಲ್ಲಿ ಗ್ರಾ.ಪಂ. ಕಾರ್ಯಪಡೆಗಳು ಸಿದ್ಧವಾಗಲಿ: ಈಶ್ವರಪ್ಪ

Last Updated 3 ಮೇ 2021, 11:03 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಿರುವುದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದರ ವಿರುದ್ಧ ಸಮರೋಪಾದಿಯಲ್ಲಿ ಹೋರಾಟ ನಡೆಸುವ ತುರ್ತುಸ್ಥಿತಿ ಬಂದಿದ್ದು, ಗ್ರಾಮ ಪಂಚಾಯತಿ ಕಾರ್ಯಪಡೆಗಳು ಸಿದ್ಧವಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ.

ಈ ಸಂಬಂಧ ಅವರು ಎಲ್ಲ ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಕಳೆದ ವರ್ಷ ಗ್ರಾಮ ಪಂಚಾಯಿತಿ ಕಾರ್ಯಪಡೆಗಳು ಹೆಚ್ಚು ಕ್ರಿಯಾಶೀಲವಾಗಿ ಕಾರ್ಯ ನಡೆಸಿದ್ದವು. ಈ ಬಾರಿಯೂ ಅದೇ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಸಭೆ, ಮದುವೆಗಳಲ್ಲಿ ಭಾಗವಹಿಸದಿರಲಿ: ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ಸಭೆ, ಸಮಾರಂಭಗಳು ಮತ್ತು ಮದುವೆಗಳಲ್ಲಿ ಭಾಗವಹಿಸದೇ ಇರಲು ಮನವೊಲಿಸಬೇಕು ಎಂದು ಈಶ್ವರಪ್ಪ ಸಲಹೆ ನೀಡಿದ್ದಾರೆ.

ಅರ್ಹ ವ್ಯಕ್ತಿಗಳು ಲಸಿಕೆ ಹಾಕಿಸಿಕೊಳ್ಳಲು, ಜನರು ತಪ್ಪದೇ ಮಾಸ್ಕ್‌ ಧರಿಸಲು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮತ್ತು ಸರ್ಕಾರ ಈ ಸಂಬಂಧ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸಲು ಮನವೊಲಿಸಬೇಕು. ಒಂದು ವೇಳೆ ಕೊರೊನಾ ಕಾಣಿಸಿಕೊಂಡರೆ ಕೂಡಲೇ ಪರೀಕ್ಷೆ ಮಾಡಿಸಿ, ಕ್ವಾರಂಟೈನ್‌ಗೆ ಒಳಪಡಿಸಿ, ಚಿಕಿತ್ಸೆ ಕೊಡಿಸಲು ಕ್ರಮವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಗ್ರಾ.ಪಂ ಕಾರ್ಯಪಡೆ: ರಾಜ್ಯದ ಎಲ್ಲ ಗ್ರಾಮಪಂಚಾಯಿತಿಗಳಲ್ಲೂ ಕಾರ್ಯಪಡೆಯನ್ನು ರಚಿಸಲಾಗಿದ್ದು, ಇದಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರೇ ಅಧ್ಯಕ್ಷರಾಗಿರುತ್ತಾರೆ. ಏಳು ಮಂದಿ ಸದಸ್ಯರನ್ನು ಕಾರ್ಯಪಡೆ ಹೊಂದಿರುತ್ತದೆ. ಇದಲ್ಲದೇ ಪ್ರತಿಯೊಂದು ಗ್ರಾಮ ಮಟ್ಟದಲ್ಲೂ ಕಾರ್ಯಪಡೆ ಇರುತ್ತದೆ.

38 ಲಕ್ಷ ಜನಕ್ಕೆ ಲಸಿಕೆ: ರಾಜ್ಯದಲ್ಲಿ ವಿವಿಧ ವಯೋಮಾನಗಳ 38,00,146 ಜನರಿಗೆ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 17,68,825 ಮಂದಿಗೆ ಮೊದಲ ಡೋಸ್‌ ನೀಡಲಾಗಿದೆ. ಈ ವರ್ಗದಲ್ಲಿ ಎರಡನೇ ಡೋಸ್‌ ಪಡೆದವರ ಸಂಖ್ಯೆ 2,74,448. 45 ರಿಂದ 59 ವರ್ಷ ವಯಸ್ಸಿನ 15,60,272 ಮಂದಿಗೆ ಮೊದಲ ಡೋಸ್‌, 1,96,601 ಮಂದಿ ಎರಡನೇ ಡೋಸ್‌ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT