<p><strong>ಬೆಂಗಳೂರು:</strong> ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಆಯ್ದ 39 ಮಠಗಳಿಗೆ ನೀಡಿದ್ದ ₹ 60 ಕೋಟಿಯನ್ನು ದೇವಸ್ಥಾನಗಳಿಗೆ ಮರು ಹಂಚಿಕೆ ಮಾಡಿದ್ದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಇದೀಗ ಅದೇ ಮಠಗಳಿಗೆ ತಲಾ ₹ 1 ಕೋಟಿಯಂತೆ ₹ 39 ಕೋಟಿ ನೀಡಲು ನಿರ್ಧರಿಸಿದೆ.</p>.<p>‘ಕೋವಿಡ್ ಕಾರಣದಿಂದ ಮಠಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಹೀಗಾಗಿ, ಹಿಂದಿನ ಸರ್ಕಾರ ಅನುದಾನ ಘೋಷಿಸಿದ್ದ ಎಲ್ಲ ಮಠಗಳಿಗೆ ಸಮಾನವಾಗಿ ಅನುದಾನ ಹಂಚಿಕೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ’ ಎಂದು ಮುಜರಾಯಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದಾಗಿ ಯಾವುದೇ ಯೋಜನೆ ಅಥವಾ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಅನುಮತಿ ಅಗತ್ಯ. ಅದಕ್ಕಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದೂ ಅವರು ಹೇಳಿದರು.</p>.<p>ಪ್ರಸಕ್ತ ಸಾಲಿನ (2020–21) ಬಜೆಟ್ನಲ್ಲಿ ಮಠಗಳಿಗೆ ಅನುದಾನ ನೀಡಲು ₹ 30 ಕೋಟಿ ಮೀಸಲಿಡಲಾಗಿದೆ. ಆದರೆ, ಯಾವ ಯಾವ ಮಠಗಳಿಗೆ ಎಷ್ಟೆಷ್ಟು ಅನುದಾನ ನೀಡಬೇಕೆಂಬ ಬಗ್ಗೆ ಹೇಳಿರಲಿಲ್ಲ. ಆದರೆ, ಈ ಮೊತ್ತದಲ್ಲಿ ₹ 1 ಕೋಟಿಯನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಉಡುಗಣಿ ಗ್ರಾಮದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಈಗಾಗಲೇ ನೀಡಲಾಗಿದೆ.</p>.<p>ಸಾಮಾನ್ಯ ಯೋಜನೆಯಡಿ ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಸಂಸ್ಥೆಗಳ ದುರಸ್ತಿ, ಜೀರ್ಣೋದ್ಧಾರ ಹಾಗೂ ನಿರ್ಮಾಣಗಳಿಗೆ ಪ್ರಸಕ್ತ ಸಾಲಿನಲ್ಲಿ ₹ 26 ಕೋಟಿ ನೀಡಲಾಗಿದೆ. ಈ ಅನುದಾನದಿಂದ ₹ 10 ಕೋಟಿಯನ್ನು ಬಳಸಿ, ಒಟ್ಟು ₹ 39 ಕೋಟಿ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ ಎಂದೂ ಮೂಲಗಳು ತಿಳಿಸಿವೆ.</p>.<p>39 ಮಠಗಳಿಗೆ ತಲಾ ₹ 1 ಕೋಟಿಯಂತೆ ಹಣ ಬಿಡುಗಡೆಗೆ ಆರ್ಥಿಕ ಇಲಾಖೆಗೆ ಪ್ರಸ್ತಾವ ಕಳುಹಿಸಿದ್ದೇನೆ. ಒಂದೆರಡು ದಿನಗಳಲ್ಲಿ ಬಿಡುಗಡೆಯಾಗಬಹುದು ಎಂದು ಮುಜರಾಯಿ ಸಚಿವಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.</p>.<p><strong>₹ 60 ಕೋಟಿ ಘೋಷಿಸಿದ್ದ ಕುಮಾರಸ್ವಾಮಿ</strong></p>.<p>ಕುಮಾರಸ್ವಾಮಿ ಮಂಡಿಸಿದ್ದ ಬಜೆಟ್ನಲ್ಲಿ ತುಮಕೂರಿನ ಸಿದ್ಧಗಂಗಾಮಠ ಮತ್ತು ಬೆಂಗಳೂರಿನ ಸೊನ್ನೇನ<br />ಹಳ್ಳಿಯ ಸ್ಫಟಿಕಪುರಿ ಶಾಖಾ ಮಠಕ್ಕೆ ತಲಾ ₹ 5 ಕೋಟಿ, ಶಿವಮೊಗ್ಗದ ಶ್ರೀ ರೇಣುಕಾನಂದ ಸ್ವಾಮೀಜಿ ನಾರಾಯಣಗುರು ಮಹಾಸಂಸ್ಥಾನ ಮಠ, ಧಾರವಾಡದ ಮುರುಘಾಮಠ, ಬಾರ್ಕೂರು ಮಠ, ದಾವಣಗೆರೆ ಹೇಮ–ವೇಮ ಸದ್ಭೋವನ ವಿದ್ಯಾಪೀಠ (ವೇಮನ ಸಂಸ್ಥಾನ) ಮತ್ತು ವಿಶ್ವ ಒಕ್ಕಲಿಗರ ಮಠಕ್ಕೆ ತಲಾ 3 ಕೋಟಿ, ಬೆಂಗಳೂರಿನ ಪುಷ್ಪಗಿರಿ ಮಠ, ದಾವಣಗೆರೆಯ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠ ಮತ್ತು ಬಳ್ಳಾರಿ ಉಜ್ಜಯಿನಿ ಸದ್ಧರ್ಮ ಪೀಠಕ್ಕೆ ತಲಾ ₹ 2 ಕೋಟಿ ಹಾಗೂ ಇತರ 29 ಮಠಗಳಿಗೆ ತಲಾ 1 ಕೋಟಿಯಂತೆ ಒಟ್ಟು ₹ 60 ಕೋಟಿ ಅನುದಾನ ಘೋಷಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಆಯ್ದ 39 ಮಠಗಳಿಗೆ ನೀಡಿದ್ದ ₹ 60 ಕೋಟಿಯನ್ನು ದೇವಸ್ಥಾನಗಳಿಗೆ ಮರು ಹಂಚಿಕೆ ಮಾಡಿದ್ದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಇದೀಗ ಅದೇ ಮಠಗಳಿಗೆ ತಲಾ ₹ 1 ಕೋಟಿಯಂತೆ ₹ 39 ಕೋಟಿ ನೀಡಲು ನಿರ್ಧರಿಸಿದೆ.</p>.<p>‘ಕೋವಿಡ್ ಕಾರಣದಿಂದ ಮಠಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಹೀಗಾಗಿ, ಹಿಂದಿನ ಸರ್ಕಾರ ಅನುದಾನ ಘೋಷಿಸಿದ್ದ ಎಲ್ಲ ಮಠಗಳಿಗೆ ಸಮಾನವಾಗಿ ಅನುದಾನ ಹಂಚಿಕೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ’ ಎಂದು ಮುಜರಾಯಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದಾಗಿ ಯಾವುದೇ ಯೋಜನೆ ಅಥವಾ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಅನುಮತಿ ಅಗತ್ಯ. ಅದಕ್ಕಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದೂ ಅವರು ಹೇಳಿದರು.</p>.<p>ಪ್ರಸಕ್ತ ಸಾಲಿನ (2020–21) ಬಜೆಟ್ನಲ್ಲಿ ಮಠಗಳಿಗೆ ಅನುದಾನ ನೀಡಲು ₹ 30 ಕೋಟಿ ಮೀಸಲಿಡಲಾಗಿದೆ. ಆದರೆ, ಯಾವ ಯಾವ ಮಠಗಳಿಗೆ ಎಷ್ಟೆಷ್ಟು ಅನುದಾನ ನೀಡಬೇಕೆಂಬ ಬಗ್ಗೆ ಹೇಳಿರಲಿಲ್ಲ. ಆದರೆ, ಈ ಮೊತ್ತದಲ್ಲಿ ₹ 1 ಕೋಟಿಯನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಉಡುಗಣಿ ಗ್ರಾಮದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಈಗಾಗಲೇ ನೀಡಲಾಗಿದೆ.</p>.<p>ಸಾಮಾನ್ಯ ಯೋಜನೆಯಡಿ ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಸಂಸ್ಥೆಗಳ ದುರಸ್ತಿ, ಜೀರ್ಣೋದ್ಧಾರ ಹಾಗೂ ನಿರ್ಮಾಣಗಳಿಗೆ ಪ್ರಸಕ್ತ ಸಾಲಿನಲ್ಲಿ ₹ 26 ಕೋಟಿ ನೀಡಲಾಗಿದೆ. ಈ ಅನುದಾನದಿಂದ ₹ 10 ಕೋಟಿಯನ್ನು ಬಳಸಿ, ಒಟ್ಟು ₹ 39 ಕೋಟಿ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ ಎಂದೂ ಮೂಲಗಳು ತಿಳಿಸಿವೆ.</p>.<p>39 ಮಠಗಳಿಗೆ ತಲಾ ₹ 1 ಕೋಟಿಯಂತೆ ಹಣ ಬಿಡುಗಡೆಗೆ ಆರ್ಥಿಕ ಇಲಾಖೆಗೆ ಪ್ರಸ್ತಾವ ಕಳುಹಿಸಿದ್ದೇನೆ. ಒಂದೆರಡು ದಿನಗಳಲ್ಲಿ ಬಿಡುಗಡೆಯಾಗಬಹುದು ಎಂದು ಮುಜರಾಯಿ ಸಚಿವಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.</p>.<p><strong>₹ 60 ಕೋಟಿ ಘೋಷಿಸಿದ್ದ ಕುಮಾರಸ್ವಾಮಿ</strong></p>.<p>ಕುಮಾರಸ್ವಾಮಿ ಮಂಡಿಸಿದ್ದ ಬಜೆಟ್ನಲ್ಲಿ ತುಮಕೂರಿನ ಸಿದ್ಧಗಂಗಾಮಠ ಮತ್ತು ಬೆಂಗಳೂರಿನ ಸೊನ್ನೇನ<br />ಹಳ್ಳಿಯ ಸ್ಫಟಿಕಪುರಿ ಶಾಖಾ ಮಠಕ್ಕೆ ತಲಾ ₹ 5 ಕೋಟಿ, ಶಿವಮೊಗ್ಗದ ಶ್ರೀ ರೇಣುಕಾನಂದ ಸ್ವಾಮೀಜಿ ನಾರಾಯಣಗುರು ಮಹಾಸಂಸ್ಥಾನ ಮಠ, ಧಾರವಾಡದ ಮುರುಘಾಮಠ, ಬಾರ್ಕೂರು ಮಠ, ದಾವಣಗೆರೆ ಹೇಮ–ವೇಮ ಸದ್ಭೋವನ ವಿದ್ಯಾಪೀಠ (ವೇಮನ ಸಂಸ್ಥಾನ) ಮತ್ತು ವಿಶ್ವ ಒಕ್ಕಲಿಗರ ಮಠಕ್ಕೆ ತಲಾ 3 ಕೋಟಿ, ಬೆಂಗಳೂರಿನ ಪುಷ್ಪಗಿರಿ ಮಠ, ದಾವಣಗೆರೆಯ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠ ಮತ್ತು ಬಳ್ಳಾರಿ ಉಜ್ಜಯಿನಿ ಸದ್ಧರ್ಮ ಪೀಠಕ್ಕೆ ತಲಾ ₹ 2 ಕೋಟಿ ಹಾಗೂ ಇತರ 29 ಮಠಗಳಿಗೆ ತಲಾ 1 ಕೋಟಿಯಂತೆ ಒಟ್ಟು ₹ 60 ಕೋಟಿ ಅನುದಾನ ಘೋಷಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>