ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಪ್ರವಾಸಕ್ಕೆ ಹಸಿರು ನಿಶಾನೆ

ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧಾರ * ಡಿವಿಎಸ್‌, ಶೆಟ್ಟರ್‌, ಕಟೀಲ್‌ ನೇತೃತ್ವದಲ್ಲೂ ಪ್ರವಾಸ
Last Updated 18 ಸೆಪ್ಟೆಂಬರ್ 2021, 19:48 IST
ಅಕ್ಷರ ಗಾತ್ರ

ದಾವಣಗೆರೆ: ರಾಜ್ಯದಾದ್ಯಂತ ಪ್ರವಾಸ ಮಾಡಲು ಬಿ.ಎಸ್‌. ಯಡಿಯೂರಪ್ಪ ಕೈಗೊಂಡಿರುವ ನಿಲುವಿಗೆ ಅಡ್ಡಿ ಪಡಿಸದಿರಲು ಶನಿವಾರ ರಾತ್ರಿ ಅಪೂರ್ವ ರೆಸಾರ್ಟ್‌ ಸಭಾಂಗಣದಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಿಎಸ್‌ವೈ ಅಲ್ಲದೇ ಇನ್ನೂ ಮೂರು ತಂಡಗಳು ಪ್ರವಾಸ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಇನ್ನೂ ಮೂರು ತಂಡಗಳು ಕೂಡ ಪ್ರವಾಸ ಕೈಗೊಳ್ಳಬೇಕು ಎಂದು ನಿರ್ಧರಿಸುವ ಮೂಲಕ ಪ್ರವಾಸದ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.

ಮುಂದೆ ಬರುವ ವಿಧಾನ ಪರಿಷತ್‌ ಚುನಾವಣೆ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಸೋಮವಾರದಿಂದಲೇ ಪ್ರಚಾರ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಯಿತು. ದೇವಸ್ಥಾನಗಳ ತೆರವು ಕಾರ್ಯಾಚರಣೆ ಬಗ್ಗೆ ಕೂಡ ಚರ್ಚೆಗಳು ನಡೆದವು ಎಂದು ಮುಖಂಡರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT