<p><strong>ಬೆಂಗಳೂರು: </strong>ಈ ವರ್ಷದ ಏಪ್ರಿಲ್ನಿಂದ ಜುಲೈವರೆಗೆ ₹13,763 ಕೋಟಿ ಜಿಎಸ್ಟಿ ಪರಿಹಾರ ರಾಜ್ಯಕ್ಕೆ ಬರಬೇಕಾಗಿದ್ದು, ಅದನ್ನು ಪಡೆಯಲು ಜಿಎಸ್ಟಿ ಮಂಡಳಿ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಜಿಎಸ್ಟಿ ಅನುಷ್ಠಾನ ಕುರಿತಂತೆ ವರ್ಚ್ಯುವಲ್ ರೂಪದಲ್ಲಿ ನಡೆದ ಸಚಿವರ ಮಂಡಳಿಯ 14 ನೇ ಸಭೆಯಲ್ಲಿ ಕರ್ನಾಟಕದ ಸರ್ಕಾರದ ಪರವಾಗಿ ಬೊಮ್ಮಾಯಿ ಪಾಲ್ಗೊಂಡಿದ್ದರು.</p>.<p>ಈ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರುತಿಳಿಸಿದ್ದಾರೆ.</p>.<p>ಆನ್ಲೈನ್ನಲ್ಲಿ ಬಾಕಿ ಇರುವ, ಮರುಪಾವತಿ ಮಾಡಬೇಕಾಗಿರುವ ತೆರಿಗೆ ಮೊತ್ತವನ್ನು ಕೂಡಲೇ ತೆರಿಗೆದಾರರಿಗೆ ಪಾವತಿಸಬೇಕು. ಇದಕ್ಕೆ ಯಾವುದೇ ನೆಪ ಹೇಳಬಾರದು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಈವರೆಗೆ 2 ಲಕ್ಷ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರಿಗೆ ₹52,251 ಕೋಟಿ ಮರುಪಾವತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಸಣ್ಣ, ಅತಿ ಸಣ್ಣ ವ್ಯಾಪಾರಸ್ಥರು ಶೂನ್ಯ ತೆರಿಗೆ ಮೊತ್ತದ ದಾಖಲೆಗಳನ್ನು ಎಸ್ಎಂಎಸ್ ಸಂದೇಶದ ಮೂಲಕ ಒದಗಿಸುವ ಬಗ್ಗೆ ಇನ್ನೂ ಹೆಚ್ಚು ಪ್ರಚಾರ ನೀಡಬೇಕು ಎಂದು ಸಲಹೆ ನೀಡಲಾಯಿತು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಈ ವರ್ಷದ ಏಪ್ರಿಲ್ನಿಂದ ಜುಲೈವರೆಗೆ ₹13,763 ಕೋಟಿ ಜಿಎಸ್ಟಿ ಪರಿಹಾರ ರಾಜ್ಯಕ್ಕೆ ಬರಬೇಕಾಗಿದ್ದು, ಅದನ್ನು ಪಡೆಯಲು ಜಿಎಸ್ಟಿ ಮಂಡಳಿ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಜಿಎಸ್ಟಿ ಅನುಷ್ಠಾನ ಕುರಿತಂತೆ ವರ್ಚ್ಯುವಲ್ ರೂಪದಲ್ಲಿ ನಡೆದ ಸಚಿವರ ಮಂಡಳಿಯ 14 ನೇ ಸಭೆಯಲ್ಲಿ ಕರ್ನಾಟಕದ ಸರ್ಕಾರದ ಪರವಾಗಿ ಬೊಮ್ಮಾಯಿ ಪಾಲ್ಗೊಂಡಿದ್ದರು.</p>.<p>ಈ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರುತಿಳಿಸಿದ್ದಾರೆ.</p>.<p>ಆನ್ಲೈನ್ನಲ್ಲಿ ಬಾಕಿ ಇರುವ, ಮರುಪಾವತಿ ಮಾಡಬೇಕಾಗಿರುವ ತೆರಿಗೆ ಮೊತ್ತವನ್ನು ಕೂಡಲೇ ತೆರಿಗೆದಾರರಿಗೆ ಪಾವತಿಸಬೇಕು. ಇದಕ್ಕೆ ಯಾವುದೇ ನೆಪ ಹೇಳಬಾರದು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಈವರೆಗೆ 2 ಲಕ್ಷ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರಿಗೆ ₹52,251 ಕೋಟಿ ಮರುಪಾವತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಸಣ್ಣ, ಅತಿ ಸಣ್ಣ ವ್ಯಾಪಾರಸ್ಥರು ಶೂನ್ಯ ತೆರಿಗೆ ಮೊತ್ತದ ದಾಖಲೆಗಳನ್ನು ಎಸ್ಎಂಎಸ್ ಸಂದೇಶದ ಮೂಲಕ ಒದಗಿಸುವ ಬಗ್ಗೆ ಇನ್ನೂ ಹೆಚ್ಚು ಪ್ರಚಾರ ನೀಡಬೇಕು ಎಂದು ಸಲಹೆ ನೀಡಲಾಯಿತು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>